dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತ ಯುವಕನನ್ನು ಉಪ್ಪಿನಂಗಡಿ ನೀರಕಟ್ಟೆ ನಿವಾಸಿ ದಿ.ಇಬ್ರಾಹಿಂ ಎಂಬವರ ಪುತ್ರ ಅನೀಸ್ (28) ಎಂದು ಗುರುತಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ವಾರದ ಹಿಂದೆ ಉಪ್ಪಿನಂಗಡಿಯ ಮಠ ಸಮೀಪ ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಅನೀಸ್ ಹಾಗೂ ಸಹಸವಾರ ಹಮೀದ್ ಹ್ಯಾಬಿಟುಡ್ ರವರು ಗಾಯಗೊಂಡಿದ್ದರು.

ಅನೀಸ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>

ಮೃತರು ತಾಯಿ, ಇಬ್ಬರು ಸಹೋದರರು ಇಬ್ಬರು ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಯುವಕನ ಮರಣ ವಾರ್ತೆ ಕೇಳಿದ ಊರಲ್ಲಿ ಸ್ಮಶಾನ ಮೌನ ಅಡಗಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!