dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: 2023-24ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಇಂದು(ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

ಇಂಜಿನಿಯರಿಂಗ್ ಕೋರ್ಸ್ಗೆ- 2,03,381 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರೆ, ಕೃಷಿ ವಿಜ್ಞಾನ ಕೋರ್ಸಿಗೆ- 1,64,187, ಪಶುಸಂಗೋಪನೆ- 166756, ಯೋಗ ಮತ್ತು ನ್ಯಾಚುರೋಪತಿಗೆ- 2,06191, ಬಿ.ಪಾರ್ಮ್ ಮತ್ತು ಡಿ.ಪಾರ್ಮ್ ಕೋರ್ಸ್ ಗೆ- 2,06,340, ನರ್ಸಿಂಗ್ ಕೋರ್ಸಿಗೆ – 1,66,808 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದರು.

ಇಂಜಿನಿಯರಿಂಗ್ ವಿಭಾಗದಲ್ಲಿ ವಿಘ್ನೇಶ್ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ. ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ತೃತೀಯ ಸ್ಥಾನವನ್ನು ಮೃದ್ಧ್ ಶೆಟ್ಟಿ ಹಾಗೂ ಎಸ್.ಸುಮೇಧ್ಗೆ 4ನೇ ಸ್ಥಾನ ಪಡೆದುಕೊಂಡಿದ್ದರೆ, ಮಾಧವ ಸೂರ್ಯಗೆ 5ನೇ ಸ್ಥಾನ ಲಭಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 20 ಹಾಗೂ 21ರಂದು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ, ನ್ಯಾಚುರೋಪತಿ, ಡಿ ಫಾರ್ಮ ಕೋರ್ಸ್ ಹಾಗೂ ಬಿಎಸ್ಸಿ ನರ್ಸಿಂಗ್ಗೆ ಪ್ರವೇಶ ಪರೀಕ್ಷೆ ನಡೆಸಿತ್ತು. ಒಟ್ಟು 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ತಿಳಿದು ಬಂದಿದೆ.

karresults.nic.in ಹಾಗೂ cetonline.karnataka.gov.in ವೆಬ್ಸೈಟ್ನಲ್ಲಿ ಫಲಿತಾಂಶ ವಿಕ್ಷಿಸಬಹುದಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!