';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮುಡಿಪು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಬಸ್ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ದೇರಳಕಟ್ಟೆ ಸಮೀಪದ ನರಿಂಗಾನ ತೌಡುಗೋಳಿ ಕ್ರಾಸ್ ಬಳಿ ಸಂಭವಿಸಿದೆ.
ಈ ಘಟನೆಯ ರೋಚಕ ದೃಶ್ಯ ಘಟನಾ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.
ಮಹಿಳೆ ಅಜಾಗರೂಕತೆಯಿಂದ ರಸ್ತೆ ದಾಟಿದ್ದು, ಬಸ್ ಇನ್ನೇನು ಡಿಕ್ಕಿ ಹೊಡೆದೇ ಬಿಟ್ಟಿತು ಎನ್ನುವಷ್ಟು ಹತ್ತಿರ ಬಂದಿದ್ದು, ಅದೃಷ್ಟವಶಾತ್ ಮಹಿಳೆ ಕ್ಷಣದಲ್ಲಿ ಪಾರಾಗಿದ್ದಾರೆ.
ಘಟನೆಯ ದೃಶ್ಯಾವಳಿ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಚಾಲಕನ ಚಾಕಚಕ್ಯತೆ, ಚುರುಕುತನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.