dtvkannada

'; } else { echo "Sorry! You are Blocked from seeing the Ads"; } ?>

ಸವಣೂರು: ಇಲ್ಲಿನ ಪ್ರತಿಷ್ಠಿತ ಬದ್ರಿಯಾ ಜುಮ್ಮಾ ಮಸ್ಜಿದ್ ರಿ ಚಾಪಲ್ಲ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಲ್ ನೂರ್ ಮುಸ್ಲಿಂ ಯೂತ್ ಫೆಡರೇಶನ್ ರಿ. ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿ ಬೆಳ್ಳಿ ಹಬ್ಬವನ್ನು ಆಚರಿಸುತ್ತಿದ್ದು, ಅದರ ಅಂಗವಾಗಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಅವುಗಳ ಸಮಗ್ರ ಮಾಹಿತಿಗಳನ್ನು ಒಳಗೊಂಡ ಫಲಕದ ಅನಾವರಣ ಹಾಗೂ ಪ್ರಸಕ್ತ ಸಾಲಿನ ಸದಸ್ಯತ್ವ ಅಭಿಯಾನಕ್ಕೆ ಜುಲೈ 07ರಂದು ಚಾಪಲ್ಲ ಹಿದಾಯತುಲ್ ಇಸ್ಲಾಂ ಮದ್ರಸದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲ್ ನೂರ್ ಮುಸ್ಲಿಂ ಯೂತ್ ಫೆಡರೇಶನ್ ರಿ. ಇದರ ಅಧ್ಯಕ್ಷ ಝಕರಿಯಾ ಮಾಂತೂರು ವಹಿಸಿದ್ದರು. ಕಾರ್ಯಕ್ರಮವನ್ನು ದುಆ ನೆರವೇರಿಸುವ ಮೂಲಕ ಉದ್ಘಾಟಿಸಿದ ಚಾಪಲ್ಲ ಮುದರ್ರಿಸ್ ಬಹುಮಾನ್ಯ ಮುಹಮ್ಮದ್ ಅಶ್ರಫ್ ಪಾಝಿಲ್ ಬಾಖವಿ ಅಲ್ ನೂರ್ ಬೆಳೆದು ಬಂದ ಹಾದಿಯ ಕುರಿತು ಮಾತನಾಡಿ, ಶುಭ ಹಾರೈಸಿದರು. ಮಾಹಿತಿ ಫಲಕದ ಅನಾವರಣವನ್ನು ಜಮಾಅತ್ ಅಧ್ಯಕ್ಷರಾದ ಉಮ್ಮರ್ ಹಾಜಿ ಕೆನರಾ ನೆರವೇರಿಸಿದರು. ಜಮಾಅತ್ ಮಾಜಿ ಅಧ್ಯಕ್ಷ ಮಹಮ್ಮದ್ ಹಾಜಿ ಕಣಿಮಜಲು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಾಪಲ್ಲ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ರಿಯಾದ್ ಇದರ ಗೌರವಾಧ್ಯಕ್ಷ ಅಬ್ದುಲ್ ಖಾದರ್ ಸಹಲ್, ಜಮಾಅತ್ ಸಮಿತಿ ಕಾರ್ಯದರ್ಶಿ ಮುಹಮ್ಮದ್ ಹಾಜಿ ಕುಂಜೂರುಕಾರ್ಸ್, ಚಾಪಲ್ಲ ಮುಸ್ಲಿಂ ಹೆಲ್ಪ್ ಲೈನ್ ಅಸೋಶಿಯೇಷನ್ ಯುಎಇ ಇದರ ಕೋಶಾಧಿಕಾರಿ ಹನೀಫ್ ಪಟ್ಟೆ, ಜಮಾಅತ್ ಸಮಿತಿ ಕೋಶಾಧಿಕಾರಿ ರಫೀಕ್ ಹಾಜಿ ಅರ್ತಿಕೆರೆ, ಅಲ್ ನೂರ್ ಮಾಜಿ ಅಧ್ಯಕ್ಷ ಉಮರಬ್ಬ ಮುಳಾರ್, ಜಮಾಅತ್ ಸಮಿತಿ ಸದಸ್ಯರಾದ ಖಾಸಿಂ ಹಾಜಿ ಕೇಕುಡೆ, ಬಿ.ಎಂ ಅಹಮ್ಮದ್ ಹಾಜಿ, ಅಬೂಬಕ್ಕರ್ ಹಾಜಿ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜಮಾಅತಿನ ಹಲವಾರು ಹಿರಿಯ ಸದಸ್ಯರು, ಜಮಾಅತಿನ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಲ್ ನೂರ್ ಸಮಿತಿಯ ಸದಸ್ಯರು ಭಾಗವಹಿಸಿದ್ದರು. ಅಲ್ ನೂರ್ ಸಂಘಟನಾ ಕಾರ್ಯದರ್ಶಿ ರಫೀಕ್ ಎಂ ಎ ಕಾರ್ಯಕ್ರಮ ನಿರೂಪಿಸಿದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!