ಮಂಗಳೂರು: ವ್ಯಕ್ತಿಯೊಬ್ಬ ತನ್ನ ಚಪ್ಪಲಿ ಕಳವುಗೈದಿದ್ದಾರೆ ಎಂದು ಪೊಲೀಸರ ತುರ್ತು ಸ್ಪಂದನಾ ನಂಬರಾದ 112 ಕರೆ ಮಾಡಿ ಪೊಲೀಸರು ಬಳಿ ದೂರನ್ನು ದಾಖಲಿಸಿದ್ದಾರೆ.
ಘಟನೆಯ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ನೇರವಾಗಿ ಮಂಗಳೂರು ನಗರದ ಬಾಲಂಭಟ್ ಹಾಲ್ಗೆ ದೌಡಾಯಿಸಿದ್ದಾರೆ.ಹಾಲ್ಗೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು ತದನಂತರ ಅಲ್ಲಿರುವ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದ್ದು ಮಾರ್ಕೆಟಿನಿಂದ ಸಾಮಾಗ್ರಿ ಹಾಕಲು ಬಂದ ವ್ಯಕ್ತಿಯೊಬ್ಬ ಚಪ್ಪಲಿ ಹಾಕಿ ತೆರಳಿದ ದೃಶ್ಯ ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ಠಾಣೆಗೆ ಬಂದು ದೂರು ನೀಡುವಂತೆ ಪೊಲೀಸರು ಸೂಚಿಸಿದ್ದು ಆದರೆ ಆತ ವ್ಯಕ್ತಿ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.ಚಿಕ್ಕ ವಿಷಯಕ್ಕೂ ತಕ್ಷಣ ಸ್ಪಂದಿಸಿದ ಪೊಲೀಸರನ್ನು ಕಂಡು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.