ದಾವಣಗೆರೆ: ಬಾಲಕನೊಬ್ಬ ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಿಗಿಯಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಮೃತಪಟ್ಟ ಬಾಲಕನನ್ನು ಕೊಟ್ರೇಶ್ (೧೩) ಎಂದು ಗುರುತಿಸಲಾಗಿದೆ, ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದ ಎನ್ನಲಾಗಿದ್ದು ಬಾಲಕ ಶಾಲೆ ಮುಗಿಸಿ ಮನೆಗೆ ಬಂದು ಜೋಕಾಲಿ ಆಡುತ್ತಿದ್ದ ವೇಳೆ ಕೊರಳಿಗೆ ಹಗ್ಗ ಸಿಲುಕಿ ಈ ಘಟನೆ ಸಂಭವಿಸಿದೆ.
ಘಟನೆ ಸಂಬಂಧ ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.