ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಇದೀಗ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿಯೂ ಅಧಿಕಾರ ಸ್ವೀಕರಿಸಿದ್ದರು. ಇದೀಗ ಅವರ ಅಗಲಿಕೆಯಿಂದ ಕ್ಷೇತ್ರದ ಜನತೆ ದಿಗ್ಭ್ರಮೆಗೊಂಡಿದ್ದಾರೆ.