ಬಂಟ್ವಾಳ: ಈಜಲು ಹೋದ ಬಾಲಕನೋರ್ವ ನೀರು ಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ನೇತ್ರಾವತಿ ನದಿ ತೀರದಲ್ಲಿ ಶನಿವಾರ ಸಂಜೆಯ ವೇಳೆಗೆ ಸಂಭವಿಸಿದೆ.

ಘಟನೆಯಲ್ಲಿ ಮೃತಪಟ್ಟ ಬಾಲಕನನ್ನು ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ಎಂದು ಗುರುತಿಸಲಾಗಿದೆ.
ಕೆಮ್ಮನ್ ಪಳಿಕೆ ಶಾಲೆಯಲ್ಲಿ ಕಲಿಯುತ್ತಿದ್ದ ಬಾಲಕ 7 ನೇ ತರಗತಿ ತೇರ್ಗಡೆ ಹೊಂದಿದ್ದು ನೆಚ್ಚಬೆಟ್ಟು ತನ್ನ ಮನೆ ಸಮೀಪದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಸ್ನೇಹಿತರ ಜೊತೆಗೆ ಪಕ್ಕದ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದು ಆ ವೇಳೆ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ನದಿ ದಡದಿಂದ ಬೊಬ್ಬೆ ಕೇಳಿ ಬಂದ ಹಿನ್ನಲೆಯಲ್ಲಿ ಹತ್ತಿರದಲ್ಲೇ ಕ್ರಿಕೆಟ್ ಆಟವಾಡುತ್ತಿದ್ದ ಯುವಕರು ಸುಹೇಲ್ ನನ್ನು ನದಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಆತ ಮೃತಪಟಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.