dtvkannada

'; } else { echo "Sorry! You are Blocked from seeing the Ads"; } ?>

ಉಳ್ಳಾಲ, ಸೆ.13: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯುವಕನೊಬ್ಬನನ್ನು ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಿನ್ನೆ ನಡೆದಿದೆ.

ಮೂಲತಃ ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸವಿರುವ ಆರೀಫ್ ಪಾಷಾ(30) ಬಂಧಿತ ಆರೋಪಿ.
ಕೂಲಿ ಕಾರ್ಮಿಕನಾಗಿದ್ದ ಆರೀಫ್ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>

ಬಾಲಕಿಯ ತಂದೆಯ ಪರಿಚಿತನಾಗಿರುವ ಆರೋಪಿ ತಿಂಡಿ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ಕೃತ್ಯದಿಂದ ಗಾಬರಿಗೊಂಡ ಬಾಲಕಿ ಓಡಿ ತಪ್ಪಿಸುವ ಸಂದರ್ಭ ಅದೇ ದಾರಿಯಲ್ಲಿ ಬರುತ್ತಿದ್ದ ಸಾಮಾಜಿಕ ಕಾರ್ಯಕರ್ತ ತಲಪಾಡಿಯ ಯಶು ಪಕಳ ದಂಪತಿ ಬೈಕ್ ನಿಲ್ಲಿಸಿ’ ಕಾಪಾಡಿ ಕಾಪಾಡಿ’ ಅನ್ನುತ್ತಿದ್ದ ಬಾಲಕಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ನಡೆದ ಕೃತ್ಯವನ್ನು ಬಾಲಕಿ ತಿಳಿಸುತ್ತಿದ್ದಂತೆ, ಸ್ಥಳೀಯರಿಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರ್ತ ಅವರ ಸಹಕಾರದೊಂದಿಗೆ ಆರೋಪಿ ಆರೀಫ್ ಪಾಷಾ ನನ್ನು ಹಿಡಿದಿದ್ದಾರೆ. ಬಳಿಕ ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಆರೋಪಿಯ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!