dtvkannada

'; } else { echo "Sorry! You are Blocked from seeing the Ads"; } ?>

ಕೊಚ್ಚಿ: ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕೋಪದಲ್ಲಿ ಯುವತಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಪಾಲಾದಲ್ಲಿರುವ ಸೇಂಟ್ ಥಾಮಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ನಿತಿನಾಮೋಲ್ ಇಂದು ಪರೀಕ್ಷೆ ಬರೆದು ಎಕ್ಸಾಂ ಹಾಲ್​ನಿಂದ ಹೊರಬರುವಾಗ ಎದುರು ಬಂದ ಅಭಿಷೇಕ್ ಎಂಬ ಯುವಕ ಚಾಕುವಿನಿಂದ ಆಕೆಯ ಕುತ್ತಿಗೆ ಕೊಯ್ದಿದ್ದಾನೆ. ಕಾಲೇಜು ಆವರಣದಲ್ಲಿಯೇ ಈ ಘಟನೆ ನಡೆದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ನಿತಿನಾಮೋಲ್​ಳನ್ನು ಆಕೆಯ ಸ್ನೇಹಿತರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ವಿಪರೀತ ರಕ್ತ ಹೋಗಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ.

ಅಭಿಷೇಕ್ ಹಾಗೂ ನಿತಿನಾಮೋಲ್ ಕ್ಲಾಸ್​ಮೇಟ್​ಗಳಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ. ಆದರೆ, ಆಕೆ ಆತನನ್ನು ಪ್ರೀತಿಸಲು ಸಾಧ್ಯವಿಲ್ಲ ಎಂದಿದ್ದಳು. ಇದರಿಂದ ಅವಮಾನಗೊಂಡಿದ್ದ ಅಭಿಷೇಕ್ ಇಂದು ಪರೀಕ್ಷೆ ಮುಗಿಸಿ ಬಂದ ಆಕೆಯ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಿದ್ದಾನೆ. ಕೆಳಗೆ ಬಿದ್ದ ಆಕೆಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

'; } else { echo "Sorry! You are Blocked from seeing the Ads"; } ?>

ಸೆಕ್ಯುರಿಟಿ ಸಿಬ್ಬಂದಿ ಕೆಳಗೆ ಬಿದ್ದಿದ್ದ ನಿತಿನಾಮೋಲ್ಳನ್ನು ಮೊದಲು ನೋಡಿದ್ದು, ಜೋರಾಗಿ ಕಿರುಚಾಡಿದ್ದಾರೆ. ಆಗ ಆಕೆಯ ಸ್ನೇಹಿತರು ಹಾಗೂ ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು. ಅಭಿಷೇಕ್ನನ್ನು ಪೊಲೀಸರು ಹಿಡಿದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!