dtvkannada

'; } else { echo "Sorry! You are Blocked from seeing the Ads"; } ?>

ಸುಳ್ಯ: ಮನೆ ಕೆಲಸ ನಿರ್ಮಾಣದ ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ದ. ಕ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ನಡೆದಿದೆ.

ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟ ದುರ್ದೈವಿಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ದಯಾನಂದ ಅವರು ಮಡ್ತಿಲ ಎಂಬಲ್ಲಿ ಮನೆ ನಿರ್ಮಾಣ ಕೆಲಸ ನಿರ್ವಹಿಸುತ್ತಿದ್ದರು.ನಿನ್ನೆ ಮಧ್ಯಾಹ್ನ ಮೆಶಿನ್ ನಲ್ಲಿ ಹಲಗೆ ಕತ್ತರಿಸುತ್ತಿದ್ದ ಸಂದರ್ಭದಲ್ಲಿ ಮೆಶಿನ್ ಆಕಸ್ಮಿಕವಾಗಿ ಕೈಯಿಂದ ತಪ್ಪಿ ತೊಡೆಯ ಬಾಗಕ್ಕೆ ತಾಗಿದೆ.

'; } else { echo "Sorry! You are Blocked from seeing the Ads"; } ?>

ಗಂಭೀರ ಗಾಯಗೊಂಡಿದ್ದ ಇವರನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ತಾಯಿ, ಪತ್ನಿ, ಪುತ್ರ , ಪುತ್ರಿಯನ್ನು ಅಗಲಿದ್ದಾರೆ. ಮೃತರ ತಾಯಿ ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!