dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ನೆಕ್ರಾಜೆ ನಿವಾಸಿ ಶ್ರೀಜಿತ್(27) ಎಂದು ತಿಳಿದುಬಂದಿದೆ.

'; } else { echo "Sorry! You are Blocked from seeing the Ads"; } ?>

ಏಪ್ರಿಲ್ 22 ರಂದು ಮನೆಯಿಂದ ಅಂಗಡಿಗೆ ತೆರಳಿ ವಾಪಾಸಾಗುತ್ತಿದ್ದ ಅಪ್ರಾಪ್ತ ಬಾಲಕನನ್ನು, ಬೈಕ್ ನಲ್ಲಿ ಬಂದ ಆರೋಪಿ, ನಿನ್ನನ್ನು ಅಜ್ಜಿ ಮನೆಗೆ ಬಿಡುತ್ತೇನೆ ಎಂದು ಒತ್ತಾಯಿಸಿ ಕರೆದುಕೊಂಡು ಹೋಗಿದ್ದ.

ಬಾಲಕ ಬೈಕ್ ನಲ್ಲಿ ಕುಳಿತುಕೊಂಡ ನಂತರ ಬಾಲಕನನ್ನು ಈಶ್ವರಮಂಗಲ ಕಡೆ ಕರೆದುಕೊಂಡು ಹೋಗಿದ್ದು, ದಾರಿಮದ್ಯೆ ಕಾಡಿಗೆ ಕರೆದುಕೊಂಡು ಹೋಗಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಬಾಲಕನ ತಂದೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

'; } else { echo "Sorry! You are Blocked from seeing the Ads"; } ?>

ಪ್ರಕರಣ ಬೆನ್ನತ್ತಿದ ಸಂಪ್ಯ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.
ಆರೋಪಿ ಪತ್ತೆ ಬಗ್ಗೆ ಪೊಲೀಸ್ ಅಧೀಕ್ಷಕರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಋಷಿಕೇಶ್ ಸೋನೆವಾನೆ, ಭಗವಾನ್ (IPS) ಮತ್ತು ಅಪರ್ ಅಧೀಕ್ಷಕರು ಕುಮಾರ್ ಚಂದ್ರ ( KSPS) ಸೂಚನೆ ಮೇರೆಗೆ ಪುತ್ತೂರು ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರಾದ ಗಾನ ಪಿ ಕುಮಾರ್(KSPS) ಅವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಗೆ ನೇತೃತ್ವದಲ್ಲಿ ಪುತ್ತೂರು ಗ್ರಾಮಾಂತರ ಪಿ ಎಸ್ ಐ ಉದಯರವಿ, ಎ ಎಸ್ ಐ ಶ್ರೀಧರ್ ರೈ, ಹೆಚ್ ಸಿ ಅದ್ರಾಮ, ಪ್ರವೀಣ್ ರೈ, ಪ್ರಶಾಂತ್ ಪಿ ಸಿ, ಲೋಕೇಶ್, ಗಿರೀಶ್ ಹಾಗೂ ಇತರನ್ನು ಒಳಗೊಂಡ ತಂಡವು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಶ್ರೀಜಿತ್ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!