dtvkannada

'; } else { echo "Sorry! You are Blocked from seeing the Ads"; } ?>

ಮುಂಬೈ: ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಹಂತಕ್ಕೇರುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ. ಆದರೆ ತಂಡದ ಭವಿಷ್ಯ ಇಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯದಲ್ಲಿ ನಿರ್ಧಾರವಾಗಲಿದೆ.

ಆರ್‌ಸಿಬಿ ಈಗಾಗಲೇ ತನ್ನ ಚರಣದ 14 ಪಂದ್ಯಗಳನ್ನು ಆಡಿ 8 ಜಯ, 6 ಸೋಲುಗಳನ್ನು ಅನುಭವಿಸಿದ್ದು ಪಾಯಿಂಟ್ಸ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಆದರೆ ತಂಡದ ರನ್-ರೇಟ್ ತೀರಾ ಕಡಿಮೆ ಇದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ರನ್-ರೇಟ್ ಉತ್ತಮವಾಗಿದೆ. ಒಂದು ವೇಳೆ ಇಂದು ನಡೆಯುವ ಡೆಲ್ಲಿ ಮತ್ತು ಮುಂಬೈ ಪಂದ್ಯದಲ್ಲಿ ರೋಹಿತ್ ಬಳಗವು ಸೋತರೆ ಡೆಲ್ಲಿ ತಂಡವು ರನ್ ರೆಟ್ ಆಧಾರದ ಮೇಲೆ ಪ್ಲೇ ಆಫ್‌ಗೇರಲಿದೆ.

'; } else { echo "Sorry! You are Blocked from seeing the Ads"; } ?>

ಈಗಾಗಲೇ ತಮ್ಮ ತಂಡದ ಭವಿಷ್ಯ ಮುಂಬೈ ಕೈಯಲ್ಲಿರುವ ಹಿನ್ನೆಲೆ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಮುಂಬೈ ಇಂಡಿಯನ್ಸ್ ತಂಡವನ್ನು ಹುರಿದುಂಬಿಸುತ್ತಿದ್ದಾರೆ. ಅಲ್ಲದೆ ಆರ್‌ಸಿಬಿಯು ಮುಂಬೈ ತಂಡವನ್ನು ಮತ್ತಷ್ಟು ಬೆಂಬಲಿಸಲು ತಮ್ಮ ಸಾಮಾಜಿಕ ಜಾಲತಾಣದ ಪ್ರೊಫೈಲ್ ಚಿತ್ರವನ್ನು ಮುಂಬೈ ತಂಡದ ಜೆರ್ಸಿಯ ಬಣ್ಣವನ್ನು ಹೋಲುವ ರೀತಿಯ ಬಣ್ಣಕ್ಕೆ ಬದಲಾಯಿಸಿಕೊಂಡಿದೆ.

— Royal Challengers Bengaluru (@RCBTweets) May 21, 2022

ಈ ಕುರಿತು ವೀಡಿಯೋವೊಂದರಲ್ಲಿ ಮಾತನಾಡಿದ ಆರ್‌ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ, ನಾವು ಮೇ 21 ರಂದು ನಡೆಯುವ ಮುಂಬೈ ಮತ್ತು ಡೆಲ್ಲಿ ಪಂದ್ಯದಲ್ಲಿ ರೋಹಿತ್ ಬಳಗವನ್ನು ಬೆಂಬಲಿಸುತ್ತೇವೆ. ಕೇವಲ ಇಬ್ಬರಲ್ಲ, ಇನ್ನೂ 25 ಬೆಂಬಲಿಗರು ಸೇರಿ ಚಿಯರ್ ಅಪ್ ಮಾಡುತ್ತೇವೆ ಎಂದರು.

ಮುಂಬೈ ಮತ್ತು ಡೆಲ್ಲಿ ನಡುವಿನ ಪಂದ್ಯ ಮುಂಬೈಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದಾದರೆ, ಡೆಲ್ಲಿಗೆ ಪ್ಲೇ ಆಫ್‌ಗೆ ಏರಲು ಕಡೆಯ ಅವಕಾಶವಾಗಿದೆ. ಈ ಪಂದ್ಯದಲ್ಲಿ ಮುಂಬೈ ಗೆದ್ದರೆ, ಆರ್‌ಸಿಬಿ ಪ್ಲೇ ಆಫ್‌ಗೆ ಎಂಟ್ರಿ ಕೊಡಲಿದೆ. ಡೆಲ್ಲಿ ಗೆದ್ದರೆ, ಆರ್‌ಸಿಬಿ ಅದೃಷ್ಟದಾಟದಲ್ಲಿ ಸೋತು ಮನೆ ದಾರಿ ಹಿಡಿಯಬೇಕಾಗಿದೆ. ಹಾಗಾಗಿ ಇಂದಿನ ಪಂದ್ಯ ಮಹತ್ವ ಪಡೆದುಕೊಂಡಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!