dtvkannada

'; } else { echo "Sorry! You are Blocked from seeing the Ads"; } ?>

ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ.

ಗದಗ ಮೂಲದ ರಫೀಕ್(21) ಎಂಬಾತ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು, ಖಾಸಗಿ ಲಾಡ್ಜ್‌ಗೆ ರೂಮ್ ಬುಕ್ಕಿಂಗ್ ಗಾಗಿ ಬಂದಿದ್ದಾರೆ ಎನ್ನಲಾಗಿದೆ.

'; } else { echo "Sorry! You are Blocked from seeing the Ads"; } ?>

ನವ ವಿವಾಹಿತ ಅನ್ಯಕೋಮಿನ ಜೋಡಿ ಎಂದು ತಿಳಿಯುತ್ತಲೇ ಲಾಡ್ಜ್ ಸಿಬ್ಬಂದಿ ರೂಮ್ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ತಕ್ಷಣ ಅವರಿಬ್ಬರು ಅಲ್ಲಿಂದ ಬೆಂಗಳೂರು ಕಡೆಗೆ ತೆರಳಲು ಬಸ್ ಹತ್ತಿದ್ದಾರೆ. ಈ ಬಗ್ಗೆ ವಿಷಯ ತಿಳಿದ ಕಾರ್ಯಕರ್ತರು ಕೊಕ್ಕಡದಲ್ಲಿ ಅಡ್ಡಗಟ್ಟಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ.

ತದನಂತರ ಅನ್ಯಕೋಮಿನ ಜೋಡಿಯನ್ನು ಕಾರ್ಯಕರ್ತರು ನೆಲ್ಯಾಡಿ ಪೊಲೀಸರಿಗೆ ಒಪ್ಪಿಸಿದ್ದು, ಯುವತಿಯು ವಿದ್ಯಾಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು ಎನ್ನಲಾಗುತ್ತಿದೆ.

'; } else { echo "Sorry! You are Blocked from seeing the Ads"; } ?>

ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!