dtvkannada

'; } else { echo "Sorry! You are Blocked from seeing the Ads"; } ?>

ಬೆಳ್ತಂಗಡಿ: ಕಾಡಿನ ವಿಷಪೂರಿತ ಅಣಬೆ ತಿಂದು ತಂದೆ ಮತ್ತು ಮಗ ಇಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಮೃತಪಟ್ಟವರನ್ನು ಮೀಯಾರೂಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಅವರ ಪುತ್ರ ಓಡಿ(45) ಎಂದು ಗುರುತಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಕಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಗುರುವ ರವರ ಕುಟುಂಬ ಗುರುವ ಸಹಿತ ಇಬ್ಬರು ಮಕ್ಕಳು ವಾಸವಾಗಿದ್ದರು.

ಬಡತನದ ಬೇಗೆಯಲ್ಲಿ ಆಹಾರಕ್ಕೆ ಏನೂ ಇಲ್ಲದಿದ್ದಾಗ ಪೊದೆಗಳಲ್ಲಿ ಸಿಗುವ ಅಣಬೆ ಎನ್ನು ಪದಾರ್ಥ ಮಾಡಿ ತಿಂದಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಅಣಬೆ ವಿಷಪೂರಿತ ಎಂದು ಅರಿಯದೇ ತಿಂದಿರಬಹುದು, ಮತ್ತೊಬ್ಬ ಮಗ ಮನೆಯಲ್ಲಿ ಇರಲಿಲ್ಲ ಆ ನಿಟ್ಟಿನಲ್ಲಿ ಮತ್ತೊಂದು ಅವಘಡ ತಪ್ಪಿದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

ಬಡತನದ ಬೇಗೆಗೆ ಎರಡು ಪ್ರಾಣ ಪಕ್ಷಿ ಹಾರಿ ಹೋಗಿದೆ ಎನ್ನಲಾಗಿದ್ದು ಈ ಘಟನೆ ತುಂಬಾನೇ ದುಃಖ ತರಿಸುವಂತಿದೆ.

ಸ್ಥಳಕ್ಕೆ ಧರ್ಮಸ್ಥಳ ಠಾಣಾಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ಹೊರ ಬರಬೇಕಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!