dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಮುಂಡೂರಿನ ಜಯಶ್ರೀ ಎಂಬ ಯುವತಿಯನ್ನು ಕೊಲೆ ನಡೆಸಿದ ಘಟನೆಗೆ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ‌ ಸಮಿತಿ ಕಾರ್ಯದರ್ಶಿ ಅಬ್ದುಲ್ ರಹೀಮ್ ಪುತ್ತೂರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಹಾಗು ಕೊಲೆಗಡುಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಸಂತಾಪ ಸೂಚಿಸಿರುವ ಅವರು
ಜಯಶ್ರೀ ಕುಟುಂಬ ಆರ್ಥಿಕವಾಗಿ ಬಡವರಾಗಿದ್ದು ಕಳೆದ ಕೊರೋನಾ ಸಮಯದಲ್ಲಿ ಆಕೆಯ ತಂದೆಯು ನಿಧನ ಹೊಂದಿದ್ದು ಈಕೆಯೆ ಕೆಲಸಕ್ಕೆ ಹೋಗಿ ಕುಟುಂಬವನ್ನು ಸಾಕಿ ಕುಟುಂಬದ ಆಧಾರ ಸ್ಥಂಭವಾಗಿದ್ದಳು.

'; } else { echo "Sorry! You are Blocked from seeing the Ads"; } ?>

ಈಗ ಈಕೆಯು ಭಗ್ನ ಪ್ರೇಮಿಯಿಂದ ಕೊಲೆಯಾಗಿ ಕುಟುಂಬ ಅತಂತ್ರವಾಗಿದೆ.ಸರ್ಕಾರವೂ ಕೂಡಲೇ ಈ ಕುಟುಂಬಕ್ಕೆ 25 ಲಕ್ಷ ಪರಿಹಾರವನ್ನು ಒದಗಿಸಬೇಕು.ಹಾಗೂ ಆಕೆಯ ತಮ್ಮನಿಗೆ ಸರ್ಕಾರಿ ಉದ್ಯೋಗ ಕೊಡಿಸಿ ಕುಟುಂಬಕ್ಕೆ ನೈತಿಕ ಬೆಂಬಲ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಬಾಳಿ ಬದುಕಬೇಕಾದ ಸಣ್ಣ ಪ್ರಾಯದಲ್ಲೇ ದುಷ್ಕರ್ಮಿಯ ಕೈಯಿಂದ ಕೊಲೆಗೀಡಾದ ಜಯಶ್ರೀಯ ಕುಟುಂಬಕ್ಕೆ ಮತ್ತು ಸ್ನೇಹಿತರಿಗೆ ಈಕೆಯ ಅಕಾಲಿಕ ಮರಣವನ್ನು ಸಹಿಸುವ ಶಕ್ತಿಯನ್ನು ಸೃಷ್ಟಿಕರ್ತನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಅವರು ಸಂತಾಪ ಸೂಚಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!