dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಇಲ್ಲಿನ ಕದ್ರಿ ಪಾರ್ಕ್‌ಗೆ ವಿಹಾರಕ್ಕೆ ಬಂದಿದ್ದ ಅನ್ಯಮತೀಯ ಜೋಡಿಗೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ನಾಲ್ವರು ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಮೂಲತಃ ಉತ್ತರ ಕರ್ನಾಟಕ ಮೂಲದ ಅನ್ಯಕೋಮಿನ ಜೋಡಿಯಾಗಿದ್ದೀ ಇವರು ಕದ್ರಿ ಪಾರ್ಕ್‌ಗೆ ಬಂದಿದ್ದು, ಇದನ್ನು ಗಮನಿಸಿದ ಸಂಘಟನೆಯವರು ಅವರನ್ನು ಪ್ರಶ್ನಿಸಿ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.ಜೋಡಿಯನ್ನು ಕದ್ರಿ ಠಾಣಾ ಪೊಲೀಸರಿಗೆ ಕಾರ್ಯಕರ್ತರು ಒಪ್ಪಿಸಿದ ಬಗ್ಗೆ ವರದಿಯಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಕದ್ರಿ ಠಾಣಾ ಪೊಲೀಸರು ಜೋಡಿಗೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!