dtvkannada

'; } else { echo "Sorry! You are Blocked from seeing the Ads"; } ?>

ತುಮಕೂರು: ಸುಳ್ಯ ತಾಲೂಕಿನ ಯುವಕನೊಬ್ಬ ತುಮಕೂರಿನ ಪಾವಗಡದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಸುಳ್ಯದ ಕೇರ್ಪಳ ನಿವಾಸಿ ಸುಳ್ಯದಲ್ಲಿ ರಿಕ್ಷಾ ಚಾಲಕರಾಗಿರುವ ರಮೇಶ್ ಎಂಬವರ ಪುತ್ರ ಪ್ರಜ್ವಲ್ ಕೇರ್ಪಳ (25) ಎಂದು ಗುರುತಿಸಲಾಗಿದೆ.

ಪ್ರಸ್ತುತ ಪ್ರಜ್ವಲ್ ಪಾವಗಡದಲ್ಲಿ ಟೋಲ್ ಸೂಪರೈಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದು ಬಂದಿದ್ದು ರವಿವಾರ ತಡ ರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಟೋಲ್ ಸಮೀಪವೇ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತರು ತಂದೆ, ತಾಯಿ, ಓರ್ವ ಸಹೋದರಿಯನ್ನು ಅಗಲಿದ್ದು ಪಾವಗಡ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!