dtvkannada

'; } else { echo "Sorry! You are Blocked from seeing the Ads"; } ?>

ಕಲಬುರಗಿ: ಬೆಳಂ ಬೆಳಗ್ಗೆ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆಗೈದ ಘಟನೆ ನಗರದ ಹಾಗರಗಾ ಕ್ರಾಸ್ ಬಳಿ ನಡೆದಿದೆ.

ಘಟನೆಯಲ್ಲಿ ಕೊಲೆಯಾದ ಮಹಿಳೆಯನ್ನು ಮಜತ್ ಸುಲ್ತಾನ್ (35) ಎಂದು ಗುರುತಿಸಲಾಗಿದೆ.

ಮಜತ್ ಸುಲ್ತಾನ್ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಢಿಕ್ಕಿ ಹೊಡೆದು, ನಂತರ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.

ನಗರದ ಜಂಜಂ ಕಾಲೋನಿ ನಿವಾಸಿಯಾಗಿದ್ದ ಮಜತ್ ಸುಲ್ತಾನ್, ಸಾಮಾಜಿಕ ಕಾರ್ಯಕರ್ತೆ ಹಾಗೂ ನ್ಯಾಯವಾದಿಯಾಗಿ ಕೆಲಸ ಮಾಡುತ್ತಿದ್ದರು‌. ಆಸ್ತಿಯ ವಿಚಾರವಾಗಿ ಅಜೀಮ್ ಗೌಂಡಿ, ವಸೀಮ್ ಗೌಂಡಿ, ನಯೀಮ್‌ ಮತ್ತು ನದೀಮ್ ಸೇರಿ‌ ಕೊಲೆ‌ ಮಾಡಿದ್ದಾರೆಂದು ಕೊಲೆಯಾದ ಮಜತ್ ಸುಲ್ತಾನ್ ಪತಿ ಸದ್ದಾಂ ಆರೋಪ ಮಾಡಿದ್ದಾರೆ.

'; } else { echo "Sorry! You are Blocked from seeing the Ads"; } ?>

ನಯೀಮ್‌ ಮತ್ತು ನದೀಮ್ ಇಬ್ಬರು ಕೊಲೆಯಾದ‌ ಮಹಿಳೆ ಪತಿ ಸದ್ದಾಂನ ಸಹೋದರರಾಗಿದ್ದು ಈ ಹಿಂದೆ ಆಸ್ತಿ ವಿಚಾರದಲ್ಲಿ ಕಲಹ ನಡೆದಿತ್ತೆನ್ನಲಾಗಿದೆ.

ಸದ್ಯ ಸ್ಥಳಕ್ಕೆ ಪೊಲೀಸ್ ಕಮಿಷನರ್ ಚೇತನ್ ಆರ್, ಡಿಸಿಪಿ ಆಡೂರು ಶ್ರೀನಿವಾಸಲು ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.‌ ಶ್ವಾನದಳ, ಬೆರಳಚ್ಚು ತಂಡದವರು ಸಹ ಆಗಮಿಸಿ ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ.

ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!