';
}
else
{
echo "Sorry! You are Blocked from seeing the Ads";
}
?>
ಸುಳ್ಯ: ಗುರುಂಪು ಎಂಬಲ್ಲಿ ಶನಿವಾರ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಮನೆ ಮಾಲಕ ಸೇರಿ ಮೂವರ ವಿರುದ್ಧ ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ ಬಗ್ಗೆ ವರದಿಯಾಗಿದೆ.
ಮಾಲಕರಾದ ಅಬೂಬಕ್ಕರ್ ಅವರ ಮನೆಯ ಹಿಂಭಾಗದ ಬರೆಗೆ ತಡೆಗೋಡೆ ನಿರ್ಮಿಸಲು ಕಾಮಗಾರಿ ನಡೆಸುತ್ತಿದ್ದಾಗ ಭೂಕುಸಿತ ಸಂಭವಿಸಿ ಕಾರ್ಮಿಕರಾದ ಸೋಮಶೇಖರ್ ರೆಡ್ಡಿ(45) ಮತ್ತು ಅವರ ಪತ್ನಿ ಶಾಂತಾ (35) ಚಂದ್ರಪ್ಪ (50) ಎಂಬ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು.
ಘಟನೆಯ ಕುರಿತಂತೆ ಸಾವಿಗೀಡಾದ ಸೋಮಶೇಖರ್ ರೆಡ್ಡಿ ಸಹೋದರ ಮಾಲತೇಶ ರೆಡ್ಡಿ ಎಂಬವರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಕಾಮಗಾರಿಯನ್ನು ನಡೆಸಿದ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಲು ಕಾರಣವಾಗಿದೆಯೆಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಹಿನ್ನೆಲೆ ಮಾಲಕ ಅಬೂಬಕರ್, ಮೇಸ್ತ್ರಿ ನಾಗರಾಜ್ ಮತ್ತು ಎಂಜಿನಿಯರ್ ವಿಜಯ ಕುಮಾರ್ ಎಂಬವರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>