dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಇಲ್ಲಿನ ಹೊರವಲಯದ ಸುರತ್ಕಲ್ ಸಮೀಪದ ಪ್ರದೇಶವೊಂದರಲ್ಲಿ ಬುದ್ಧಿಮಾಂದ್ಯೆಯನ್ನು ಅತ್ಯಾಚಾರಗೈದಿದ್ದು ಈ ಒಂದು ಆರೋಪದಡಿಯಲ್ಲಿ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತ್ಯಾಚಾರ ಎಸಗಿದ ಆರೋಪಿಯನ್ನು ರಾಜ್‌ಭಟ್ (೬೫) ಘಂದು ತಿಳಿದು ಬಂದಿದ್ದು ಈ ಕಾಮುಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಯು ಸೂರಿಂಜೆ ಮೂಲದ ರಾಜ್‌ಭಟ್ ಬ್ರೋಕರ್-ಮಧ್ಯವರ್ತಿ ಕೆಲಸ ಮಾಡಿಕೊಂಡಿದ್ದು, ಚೇಳಾಯಾರು ಪದವು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನೆಂದು ತಿಳಿದು ಬಂದಿದೆ.

ಮಾ.27ರಂದು ಆರೋಪಿಯು ಬುದ್ಧಿಮಾಂದ್ಯೆಯನ್ನು ಆಕೆಯ ಮನೆಯಲ್ಲೆ ಅತ್ಯಾಚಾರ ಎಸಗಿದ್ದು ತದನಂತರ ಅಲ್ಲಿಂದ ಕಾಲ್ಕಿತ್ತಿದ್ದಾನೆಂದು ಆರೋಪಿಸಲಾಗಿದೆ.

ಆರೋಪಿಯು ವಿವಾಹಿತನಾಗಿದ್ದು, ಹಲವು ವರ್ಷಗಳಿಂದ ಪತ್ನಿ ಮತ್ತು ಮಕ್ಕಳಿಂದ ದೂರವಾಗಿದ್ದಾನೆ ಎಂದು ತಿಳಿದುಬಂದಿದೆ.

ಅತ್ಯಾಚಾರ ಎಸಗಿದ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗುತ್ತಲೇ ಆರೋಪಿಯು ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!