dtvkannada

'; } else { echo "Sorry! You are Blocked from seeing the Ads"; } ?>

ಬಂಟ್ವಾಳ: ಮನೆಯೊಂದರ ಮೇಲ್ಬಾಗದಲ್ಲಿ ನಿಂತು ಕೆಸ ಮಾಡುತ್ತಿದ್ದ ವ್ಯಕ್ತಿಯೋರ್ವ ಆಯತಪ್ಪಿ ಕೆಳಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಸಿದ್ಧಕಟ್ಟೆಯ ದೇವಸ ನಿವಾಸಿ ದುರ್ಗಾಪ್ರಸಾದ್ (೩೨) ಎಂದು ತಿಳಿದು ಬಂದಿದೆ.

ಮೃತಪಟ್ಟ ವ್ಯಕ್ತಿಯು ಮಾಡಮೆ ಎಂಬಲ್ಲಿ ಮನೆಯೊಂದರ ಪೈಪ್‌ಲೈನ್ ಪ್ಲಂಬಿಂಗ್ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಆಯತಪ್ಪಿ ಮನೆಯ ಮೇಲ್ಭಾಗದಿಂದ ಕೆಳಕ್ಕೆ ಬಿದ್ದಿದ್ದು ಬಿದ್ದ ರಭಸದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!