dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ದ್ವಿತೀಯ ಪಿಯು ಪಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಟ್ಟತ್ತಾರಿನ ಒಂದೇ ಮನೆಯ ಮೂವರು ಸಹೋದರರು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ವಿಶೇಷ ಸಾಧನೆ ಮಾಡಿದ್ದಾರೆ.

ಕುಂಬ್ರ ಇಲ್ಲಿನ ಕರ್ನಾಟಕ ಇಸ್ಲಾಮಿಕ್ ಸೆಂಟರ್(KIC) ವಿದ್ಯಾರ್ಥಿ ಹಾಫೀಳ್ ಮುಹಮ್ಮದ್ ಬುರ್ಹಾನ್ ವಾಣಿಜ್ಯ ವಿಭಾಗದಲ್ಲಿ (471) ಅಂಕ ಗಳಿಸುವ ಮೂಲಕ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅದೇ ರೀತಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಕಲಾ ವಿಭಾಗದ ವಿದ್ಯಾರ್ಥಿಗಳಾದ ಮುಹಮ್ಮದ್ ಮುಝಮ್ಮಿಲ್ (432) ಹಾಗೂ ಮುಹಮ್ಮದ್ ಫಕ್ರುದ್ದೀನ್ (413) ಅಂಕ ಗಳಿಸುವ ಮೂಲಕ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

'; } else { echo "Sorry! You are Blocked from seeing the Ads"; } ?>

ಈ ಮೂವರು ವಿದ್ಯಾರ್ಥಿಗಳು ಸಹೋದರರಾಗಿದ್ದು, ಕಟ್ಟತ್ತಾರ್ ನಿವಾಸಿ ಅಬ್ದುಲ್ಲಾ ಮುಸ್ಲಿಯಾರ್ ಹಾಗೂ ನಬಿಸಾ ದಂಪತಿಗಳ ಪುತ್ರರಾಗಿರುತ್ತಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!