dtvkannada

'; } else { echo "Sorry! You are Blocked from seeing the Ads"; } ?>

ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟು ಆರು ಜನರಿಗೆ ಗಾಯಗಳಾದ ಘಟನೆ ಚಿತ್ತಾಪುರ ತಾಲೂಕಿನ ದಿಗ್ಗಾಂವ್ ಗ್ರಾಮದಲ್ಲಿ ವರದಿಯಾಗಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಈ ಒಂದು ದುರ್ಘಟನೆಯಲ್ಲಿ ದಿಗ್ಗಾಂವ್ ಗ್ರಾಮದ ಭೀಮು ಪೂಜಾರಿ (18) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಇದೇ ವೇಳೆಯಲ್ಲಿ ಕೋಡ್ಲಾ ಮತ್ತು ದಿಗ್ಗಾಂವ್ ಗ್ರಾಮದಲ್ಲಿ ಸಿಡಿಲು ಬಡಿದು ಆರು ಜನ ಗಂಭೀರ ಗಾಯಗೊಂಡಿರುವ ಘಟನೆಯೂ ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

'; } else { echo "Sorry! You are Blocked from seeing the Ads"; } ?>

ಸ್ಥಳಕ್ಕೆ ಪೊಲೀಸರು, ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಈ ಮೊದಲೇ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ:- ರಾಜ್ಯದ ಕಲಬುಗಿಯೂ ಸೇರಿದಂತೆ ಹಲವು‌ ಜಿಲ್ಲೆಯಲ್ಲಿ ಸಂಜೆ ಆಥವಾ ತಡ ರಾತ್ರಿ ಭಾರಿ ಮಳೆ, ಬಿರುಗಾಳಿ ಮತ್ತು ಸಿಡಿಲು ಬೀಳುವ ಸಾಧ್ಯತೆ ಇದ್ದು, ಜನರು ಜಾನುವಾರು ಹಾಗೂ ತಮ್ಮ ಜೀವಗಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದ್ದು ಅದರಂತೆ‌ ಘಟನೆಯು ನಡೆದಿದ್ದು ದುರದೃಷ್ಟವಶಾತ್ ಒಂದು ಜೀವವನ್ನು ಕಳೆದುಕೊಂಡು ಆರು ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯು ನಡೆಯಿತು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!