dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ರಾಜ್ಯ ಗೃಹ ಸಚಿವರಾದ ಡಾ.ಪರಮೇಶ್ವರ್ ಅವರು ಇಂದಿನಿಂದ 2 ದಿನ ಮಂಗಳೂರು, ಉಡುಪಿ ಪ್ರವಾಸ ಕೈಗೊಂಡಿದ್ದು ಇಂದು ಬೆಳಿಗ್ಗೆ 8.35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಳಗ್ಗೆ 10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿಯಲ್ಲಿ ವಲಯ ಪರಿಶೀಲನಾ ಸಭೆ ನಡೆಸಿದ ಬಗ್ಗೆ ವರದಿಯಾಗಿದೆ.

ತದನಂತರ ಇಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದು, 12.30ಕ್ಕೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಉಡುಪಿಗೆ ತೆರಳಲಿದ್ದಾರೆ. ಉಡುಪಿಯಲ್ಲೂ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಮತ್ತೆ ಮುಂದುವರಿದು ಇಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಸಂಜೆ 5.30ಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಬಳಿಕ ಸಂಜೆ 6 ಗಂಟೆಗೆ ಕೊಲ್ಲೂರಿಗೆ ತೆರಳಲಿದ್ದಾರೆ.

ಜೂನ್ 7 ರಂದು ಬುಧವಾರ ಬೆಳಿಗ್ಗೆ 7 ಗಂಟೆಗೆ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಭಾಗವಹಿಸಿ ವಾಪಸ್ ಆಗಲಿದ್ದಾರೆ. ಡಾ. ಪರವೇಶ್ವರ್ ಅವರು ಗೃಹ ಸಚಿವರಾದ ಬಳಿಕ ಮೊದಲ ಬಾರಿಗೆ ಮಂಗಳೂರು, ಉಡುಪಿ ಪ್ರವಾಸ ಕೈಗೊಂಡಿರುವುದು ಇಂದು ಮಂಗಳೂರಿಗೆ ಆಗಮಿಸಿದ ಗೃಹ ಸಚಿವರನ್ನು ಉಡುಪಿ ಮತ್ತು ದ.ಕ ಜಿಲ್ಲೆಯ ಕಾಂಗ್ರೆಸಿನ ಏಕೈಕ ಶಾಸಕ ಅಶೋಕ್ ಕುಮಾರ್ ರೈಯವರು ಸ್ವಾಗತಿಸಿದರು.ಜೊತೆಗೆ ಕಾಂಗ್ರೆಸ್ ಜಿಲ್ಲಾ ನಾಯಕರು ಉಪಸ್ಥಿತರಿದ್ದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!