dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಮತ್ತು ದಕ ಜಿಲ್ಲೆಯಲ್ಲಿ ಕೇವಲ ಎರಡು ಕಾಂಗ್ರೆಸ್ ಶಾಸಕರು ಮಾತ್ರ ಅಯ್ಕೆಯಾಗಿದ್ದು ಈ ಪೈಕಿ ಯು.ಟಿ ಖಾದರ್ ಸ್ಪೀಕರ್ ಆಗಿ ನೇಮಕವಾಗಿದ್ದಾರೆ.

ಖಾದರ್ ಸ್ಪೀಕರ್ ಆಗಿ ನೇಮಕವಾದ ಬಳಿಕ ಅವರು ಪಕ್ಷದ ಯಾವುದೇ ಕಾರ್ಯಕ್ರಮ ಅಥವಾ ಪಕ್ಷದ ಯಾವುದೇ ಹುದ್ದೆಯನ್ನು ಅಲಂಕರಿಸುವಂತಿಲ್ಲ. ಈ ಕಾರಣಕ್ಕೆ ಉಭಯ ಜಿಲ್ಲೆಯಲ್ಲಿ ಇರುವ ಏಕೈಕ ಕಾಂಗ್ರೆಸ್ ಶಾಸಕ ಅಶೋಕ್ ರೈಯಾಗಿದ್ದು ಈದೀಗ ಪುತ್ತೂರು ಶಾಸಕರಾದ ಅಶೋಕ್ ರೈಗೆ ಕಾಂಗ್ರೆಸ್ ಪಕ್ಷ ಹೆಚ್ಚಿನ ಜವಾಬ್ದಾರಿಯನ್ನು ಹೊರಿಸಿದೆ.

ಸುಳ್ಯ ವಿಧಾನಸಭಾ ಕ್ಷೇತ್ರವನ್ನು ನೋಡಿಕೊಳ್ಳಿ ಅಲ್ಲಿನವರ ಜೊತೆ ಸಂಪರ್ಕ ಇರಿಸಿಕೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಸೂಚನೆಯನ್ನು ನೀಡಿದ್ದಾರೆ. ಪುತ್ತೂರಿನ ಶಾಸಕರು ಸಚಿವರಲ್ಲದೇ ಇದ್ದರೂ ಉಭಯ ಜಿಲ್ಲೆಗಳಲ್ಲಿ ಹೆಚ್ಚಿನ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!