dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ರಾಜ್ಯದಲ್ಲಿ ಬಾರೀ ವಿವಾದಕ್ಕೊಳಗಾಗಿದ್ದ ಮತಾಂತರ ನಿಷೇದ ಕಾಯ್ದೆಯನ್ನು ನೂತನ ಕಾಂಗ್ರೆಸ್ ಸರಕಾರ ರದ್ದುಗೊಳಿಸುವುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಹಕ್ಕು ಕಾಯ್ದೆಯ ಹಿಂದಿನ ತಿದ್ದುಪಡಿ ವಾಪಸ್ ಪಡೆದು, ಜುಲೈ 3ರಿಂದ ಆರಂಭವಾಗುವ ಅಧಿವೇಶನದಲ್ಲಿ ಬಿಲ್ ಮಂಡನೆ ಮಂಡನೆ ಮಾಡಲಾಗುತ್ತದೆ ಎಂದು ಹೇಳಿದರು.

'; } else { echo "Sorry! You are Blocked from seeing the Ads"; } ?>

ಈ ಮೂಲಕ ವಿವಾದಿತ ಕಾಯ್ದೆಯೊಂದನ್ನು ರಾಜ್ಯ ಸರಕಾರ ರದ್ದೂಗೊಳಿಸಿ ಆದೇಶ ಹೊರಡಿಸಿದೆ.

ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ, ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ಸಾಕಷ್ಟು ವಿವಾದವನ್ನು‌ ಹುಟ್ಟು ಹಾಕಿತ್ತು. ಮತಾಂತರ ತಡೆಯುವ ನಿಟ್ಟಿನಲ್ಲಿ ಈ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದು ಬಿಜೆಪಿ ಸರ್ಕಾರ ಸಮರ್ಥಿಸಿಕೊಂಡಿತ್ತು. ಆದರೆ ಸದನದಲ್ಲಿ ಕಾಂಗ್ರೆಸ್ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. 

'; } else { echo "Sorry! You are Blocked from seeing the Ads"; } ?>

ಆದರೆ ಇದೀಗ ಮೂರನೇ ಕ್ಯಾಬಿನೆಟ್ ಸಭೆಯಲ್ಲೇ ಮತಾಂತರ ನಿಷೇಧ ಕಾಯ್ದೆಗೆ ಕೊಕ್ ಕೊಡಲಾಗಿದೆ. ಈ ಕುರಿತಾದ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಕಾನೂನು‌‌ ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!