dtvkannada

'; } else { echo "Sorry! You are Blocked from seeing the Ads"; } ?>

ಚಿಕ್ಕಮಗಳೂರು: ಬಿಸಿ ಬಿಸಿ ಕುದಿಯುತ್ತಿದ್ದ ಎಣ್ಣೆ ಇರುವ ಬಾಣಲೆಗೆ ಬಿದ್ದಿದ್ದ 25 ವರ್ಷದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಘಟನೆಯಲ್ಲಿ ಮೃತಪಟ್ಟ ಯುವಕನನ್ನು ಸಂದೇಶ್ ಎಂದು ಗುರುತಿಸಲಾಗಿದೆ. ಮೃತ ಸಂದೇಶ್ ಕಿಕ್ರೆ ಗ್ರಾಮದಲ್ಲಿ ಚಿಪ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಚಿಪ್ಸ್‌ ಫ್ಯಾಕ್ಟರಿಯಲ್ಲಿ 20 ಕ್ಕೂ ಹೆಚ್ಚು ಯುವಕರು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ 13 ದಿನಗಳ ಹಿಂದೆ ಹೊಗೆ ಪೈಪ್ ಕ್ಲೀನ್ ಮಾಡಲು ಫ್ಯಾಕ್ಟರಿಯ ಮೇಲ್ಛಾವಣಿಗೆ ಹತ್ತಿದ್ದ ಸಂದೇಶ್ ಆಯಾ ತಪ್ಪಿ ಸೀದಾ ಚಿಪ್ಸ್ ಕಾಯಿಸುವ ದೊಡ್ಡ ಬಾಣಲೆಗೆ ಬಿದ್ದಿದ್ದ. ಸಂದೇಶ್‌ ದೇಹದ 80% ರಷ್ಟು ಭಾಗ ಸುಟ್ಟು ಹೋಗಿತ್ತು. ಕೂಡಲೇ ಶೃಂಗೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಲಾಗಿತ್ತು.

ಕಳೆದ 13 ದಿನಗಳಿಂದ ಸಾವು-ಬದುಕಿನ ಮಧ್ಯೆ ಹೋರಾಡಿದ್ದ ಸಂದೇಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸಂದೇಶ್ ಮೇಲ್ಛಾವಣಿಗೆ ಹತ್ತಿದಾಗ ಕಬ್ಬಿಣದ ರಾಡ್ ಮೇಲೆ ನಡೆದು ಹೋಗಿದ್ದರೆ ಯಾವುದೇ ಅನಾಹುತ ಸಂಭವಿಸುತ್ತಿರಲಿಲ್ಲ. ಆದರೆ ಸಂದೇಶ್ ಸಿಮೆಂಟ್ ಶೀಟ್‍ಗಳ ಮೇಲೆ ನಡೆದು ಹೋದ ಪರಿಣಾಮ ಆಯಾತಪ್ಪಿ ಬಿದ್ದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಆತನೇ ಬೆಂಕಿ ಹಾಕಿ ಕಾಯಿಸಿದ್ದ ಕುದಿಯತ್ತಿದ್ದ ಎಣ್ಣೆ ಬಾಣಲೆಗೆ ಬಿದ್ದು ತಲೆ ಹಾಗೂ ಕಾಲು ಬಿಟ್ಟು ದೇಹದ ಬಹುತೇಕ ಭಾಗ ಸುಟ್ಟು ಹೋಗಿತ್ತು. 13 ದಿನಗಳ ಕಾಲ ಸಾವು-ಬದುಕಿನ ಮಧ್ಯೆ ಹೋರಾಡಿದ ಸಂದೇಶ್‌ ಸಾವನ್ನಪ್ಪಿದ್ದಾನೆ‌ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!