dtvkannada

'; } else { echo "Sorry! You are Blocked from seeing the Ads"; } ?>

ಬೆಳ್ತಂಗಡಿ: ಬಾಲಕನೋರ್ವ ತನ್ನ ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಬಿಗಿದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ.

ಮೃತಪಟ್ಟ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ, ಮುಂಡಾಜೆ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಶ್ರೀಶ (14) ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಉಯ್ಯಾಲೆಯ ಹಗ್ಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿದೆ.

ಬಾಲಕನ ಶವ ಶವಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು,‌ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಧನರಾಜ್ ಮತ್ತು ಸಿಬಂದಿ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!