';
}
else
{
echo "Sorry! You are Blocked from seeing the Ads";
}
?>
ಸುಳ್ಯ: ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಬಿಳಿಯಾರಿನ ದಿ.ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ.
ಬಾಲಕನ ತಾಯಿ ಮತ್ತು ಮನೆಯವರು ಎರ್ನಾಕುಲಂ ಗೆ ಹೋಗಿದ್ದ ವೇಳೆ ಮನೆಯಲ್ಲಿ ಈತ ಒಬ್ಬನೆ ಇದ್ದನು. ಸಂಜೆ ಅರಂತೋಡಿನ ತನ್ನ ಅಜ್ಜಿ ಮನೆಗೆ ಹೋಗಿ ಮಾತನಾಡಿ ಮನೆಗೆ ಬಂದಿದ್ದ ಎನ್ನಲಾಗಿದೆ. ರಾತ್ರಿ ತಾಯಿ ಫೋನ್ ಮಾಡಿ ಮಾತನಾಡಿದ್ದು ಬಳಿಕ ತಾಯಿ ಕರೆ ಮಾಡಿದಾಗ ಕರೆ ಸ್ವೀಕರಿಸಿರಲಿಲ್ಲ. ಬಳಿಕ ಅರಂತೋಡಿನ ಅಜ್ಜಿ ಮನೆಗೆ ಫೋನ್ ಮಾಡಿ ಹನ್ಸೀಫ್ ಫೋನ್ ರಿಸೀವ್ ಮಾಡುತ್ತಿಲ್ಲ ಎಂದು ಹೇಳಿದರು. ಆತನ ಮಾವ ಬಿಳಿಯಾರಿಗೆ ಬಂದು ನೋಡಿದಾಗ ಈತ ಫ್ಯಾನಿಗೆ ನೇಣು ಹಾಕಿರುವುದು ಕಂಡು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>