dtvkannada

ಮಂಗಳೂರು: ಮಲ್ಲಿಕಾರ್ಜುನ ಖರ್ಗೆಯವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ, ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲು SDPI ಆಗ್ರಹಿಸಿದೆ.

ಘಟನೆಯ ಕುರಿತು ಟ್ವೀಟ್ ಮಾಡಿರುವ SDPI ದಕ್ಷಿಣ ಕನ್ನಡ ಜಿಲ್ಲಾ ಘಟಕವು ಮಲ್ಲಿಕಾರ್ಜುನ ಖರ್ಗೆಯವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ್ದು ಆರಗ ಜ್ಞಾನೇಂದ್ರ ನಡೆ ಖಂಡನೀಯವಾಗಿದ್ದು ಅವರು ವಿರುದ್ಧ SC ST ದೌರ್ಜನ್ಯ ಕಾಯ್ದೆಯಡಿ ಕೇಸು ದಾಖಲಿಸಿ ಬಂಧಿಸಬೇಕು ಈ ಒಂದು ಕಾರ್ಯವನ್ನು ಧೈರ್ಯದಿಂದ ಮುಖ್ಯಮಂತ್ರಿಯವರು ಮಾಡಬೇಕೆಂದು SDPI ಒತ್ತಾಯ ಮಾಡಿದ್ದು ಮೂಲ ನಿವಾಸಿಗಳಾದ ದಲಿತರ ಬಗ್ಗೆ ಬಿಜೆಪಿಗೆ ಇರುವ ಮನಸ್ಥಿತಿಯನ್ನು ಬಹಿರಂಗಪಡಿಸಿದೆ ಎಂದು ಬರೆದುಕೊಂಡಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!