ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿ ಕೋಮು ಗಲಭೆಗೆ ಸಾಥ್ ಕೊಟ್ಟಿದ್ದ ಕಳಂಜದ ಮಸೂದ್ ಕೊಲೆ ಪ್ರಕರಣದ ಓರ್ವ ಆರೋಪಿಯನ್ನು ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಬಗ್ಗೆ ವರದಿಯಾಗಿದೆ.

ಕಳೆದ ವರ್ಷ ಜು.೧೯-೨೦೨೨ ರಂದು ಪರಿಚಯಸ್ಥ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರದಲ್ಲಿ ಉಂಟಾದ ಜಗಳದ ಬಳಿಕ ರಾಜಿಯಲ್ಲಿ ಇತ್ಯರ್ಥ ಮಾಡಲು ಕರೆಸಿಕೊಂಡಿದ್ದು ನಂತರ ಅಲ್ಲಿ ಸೇರಿದ ಹಿಂದೂ ಯುವಕರ ಗುಂಪು ಮಸೂದ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.

ಮಸೂದ್ ಕೊಲೆ ಆರೋಪಿಗಳಲ್ಲಿ ಎಂಟನೇ ಆರೋಪಿಯಾಗಿರುವ ಭಾಸ್ಕರ ಕೆ.ಎಂ ಎಂಬಾತ ಜಾಮೀನು ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದು ಅರ್ಜಿಯನ್ನು ಪರಿಶೀಲಿಸಿದ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.
ಈ ಒಂದು ಕೊಲೆಯಲ್ಲಿ ಎಂಟು ಮಂದಿ ಭಾಗಿಯಾಗಿದ್ದು ಅಭಿಲಾಷ್, ಶಿವಪ್ರಸಾದ್,ಸುನಿಲ್ ಕೆ, ಸುಧೀರ್, ರಂಜಿತ್ ಬಿ, ಸದಾಶಿವ ಪೂಜಾರಿ, ರಂಜಿತ್, ಭಾಸ್ಕರ ಕೆ ಎಂ ಆರೋಪಿಗಳನ್ನು ಬಂಧಿಸಲಾಗಿತ್ತು ಅದರಲ್ಲಿ ಓರ್ವ ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ.