dtvkannada

ಪುತ್ತೂರು: ಈಶ್ವರಮಂಗಲ ಮೇನಾಲ ಮಖಾಂ ದರ್ಗಾ ಶರೀಫ್‌ಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದರ್ಗಾದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆದಿತ್ತು.

ಈ ಸಂದರ್ಭದಲ್ಲಿ ಮಸೀದಿಯ ಧರ್ಮಗುರುಗಳಾದ ಜಮಾಲುದ್ದೀನ್ ತಂಙಳ್ ದುಗ್ಗಲಡ್ಕ, ನೆಟ್ಟಣಿಗೆ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೂಸಾನ್, ನೆಟ್ಟನಿಗೆ ಮುಡ್ನೂರು ಗ್ರಾಪಂ ಸದಸ್ಯರಾದ ಶ್ರೀರಾಂ ಪಕ್ಕಳ, ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ನೆಟ್ಟಣಿಗೆ ಮುಡ್ನೂರು ಗ್ರಾಪಂ ಉಪಾಧ್ಯಕ್ಷರಾದ ರಾಮ ಕೆ ಮೇನಾಲ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಉದ್ಯಮಿಗಳಾದ ರಿತೇಶ್ ಶೆಟ್ಟಿ ಮಂಗಳೂರು, ಪುತ್ತೂರು ಡ್ಯಾಶ್ ಮಾರ್ಕೆಂಟಿಂಗ್ ವ್ಯವಸ್ಥಾಪಕರಾದ ನಿಹಾಲ್ ಶೆಟ್ಟಿ ಕಲ್ಲಾರೆ, ದೀಕ್ಷಿತ್ ರೈ ಕುತ್ಯಾಳ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ರಹಿಮಾನ್ ಮೇನಾಲ, ಕರ್ನೂರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಅಬ್ದುಲ್ಲ , ವಿಕ್ರಂ ರೈ ಸಾಂತ್ಯ, ಸುರೇಶ್ ಮೇನಾಲ, ಅಬೂ ಮೇನಾಲ, ಎಂ ಪಿ ಅಬ್ದುಲ್ ಕುಂಞಿ ಪಳ್ಳತ್ತೂರು, ಗಿರೀಶ್ ರೈ ಮರ್ಕಡ,ಅಬ್ದುಲ್ ಕುಂಞಿ ಮೇನಾಲ, ಇಬ್ರಾಹಿಂ ಪಳ್ಳತ್ತೂರು ಮೊದಲಾದವರು ಉಪಸ್ತಿತರಿದ್ದರು.

ಇದೇ ಸಂದರ್ಭದಲ್ಲಿ ನೂತನ ದರ್ಗಾ ಕಟ್ಟಡ ಕಾಮಗಾರಿಗೆ ರೂ. ೫೦ ಸಾವಿರ ಅನುದಾನವನ್ನು ನೀಡುವುದಾಗಿ ಶಾಸಕರು ಭರವಸೆ ನೀಡಿದರು.ಜಮಾತ್ ಕಮಿಟಿ ವತಿಯಿಂದ ಶಾಸಕರನ್ನು ಶಾಲು ಹೊದಿಸಿ ಸನ್ಮಾನಿಸಿದರು.

By dtv

Leave a Reply

Your email address will not be published. Required fields are marked *

error: Content is protected !!