ಪುತ್ತೂರು: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯನ್ನು ಭೇಟಿಯಾಗಲು ರಾಯಚೂರಿನಿಂದ ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ಯುವಕ ಮತ್ತು ಆತನ ಸ್ನೇಹಿತನ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣ ನಿನ್ನೆ ನಡೆದಿತ್ತು.
ಘಟನೆ ಸಂಬಂಧ ಯುವಕರು ನೀಡಿದ ದೂರಿನ ಅನ್ವಯ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.