dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಕುಂಬ್ರದ ಶೇಖಮಲೆ ಎಂಬಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ತರಳುತ್ತಿದ್ದ ಸಂದರ್ಭ ಬೋಲೋರ ಕಾರು ಹಾಗೂ ಆಲ್ಟೊ ಕಾರ್ ನಡುವೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಆಲ್ಟೋ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳನ್ನು ಸೋಮವಾರಪೇಟೆಯ ಲೋಕೇಶ ಹಾಗೂ ರವೀಂದ್ರ ಎಂದು ಗುರುತಿಸಲಾಗಿದೆ. ಈ ಸ್ಥಳದಲ್ಲಿ ಹಲವು ಬಾರಿ ಅಪಘಾತ ಸಂಭವಿಸಿದ್ದು ವರ್ಷಗಳ ಹಿಂದೆ ಹಲವು ಜೀವಗಳನ್ನು ಬಲಿ ಪಡೆದ ಶೇಖಮಲೆ ಟರ್ನ್ ಇದಾಗಿದ್ದು ಇದಕ್ಕೆ ಯಾವಾಗ ಮುಕ್ತಿ ನೀಡುತ್ತಾರೋ ಕಾದುನೋಡಬೇಕಾಗಿದೆ.

ಘಟನೆಯಲ್ಲಿ ಬೋಲೆರೋ ವಾಹನದಲ್ಲಿದ್ದವರು ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಮೃತಪಟ್ಟ ಇಬ್ಬರ ಮೃತ ದೇಹಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!