dtvkannada

ಹಾಸನ: ಕುಡಿದ ಅಮಲಿನಲ್ಲಿ ಇಬ್ಬರು ಅಪರಿಚಿತರು ಹುಚ್ಚಾಟ ಮೆರೆದಿರುವ ಪ್ರಸಂಗ ಜಿಲ್ಲೆಯಲ್ಲಿ ನಡೆದಿದೆ.ನಿಟ್ಟೂರು ಸರ್ಕಲ್‍ನ ನಡುರಸ್ತೆಯಲ್ಲೇ ತೂರಾಡುತ್ತಾ ಇಬ್ಬರೂ ಕಿತ್ತಾಡಿಕೊಂಡಿದ್ದಾರೆ. ಎಣ್ಣೆ ನಶೆಯಲ್ಲಿ ಕಿತ್ತಾಟ ಅತಿರೇಕಕ್ಕೆ ಹೋಗಿದೆ. ಪರಿಣಾಮ ದೊಣ್ಣೆಯಿಂದ ಎದುರಿಗಿದ್ದವನ ತಲೆಗೆ ಗಂಭೀರವಾಗಿ ಹಲ್ಲೆ ಮಾಡಿದ್ದು, ಆತ ಅಲ್ಲೆ ಕುಸಿದು ಬಿದ್ದಿದ್ದಾನೆ.

ಕೂಡಲೇ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆಗೊಳಗಾದವನ ಸ್ಥಿತಿ ಗಂಭೀರವಾಗಿದೆ. ಆದರೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿಲ್ಲ. 2 ದಿನದ ಹಿಂದೆ ಈ ಘಟನೆ ನಡೆದಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗ್ತಿದೆ.

By dtv

Leave a Reply

Your email address will not be published. Required fields are marked *

error: Content is protected !!