dtvkannada

ಮಂಗಳೂರು: ವರ್ಷಗಳ ಹಿಂದೆ ಟಾರ್ಗೆಟ್ ಇಲ್ಯಾಸ್ ರನ್ನು ಬರ್ಬರವಾಗಿ ಹತ್ಯೆಯಾಗಿದ್ದು ಪ್ರಕರಣದ ಆರೋಪಿಯಾಗಿದ್ದ ರೌಡಿಶೀಟರ್ ಕಡಪ್ಪರ ಸಮೀರ್ ಮೇಲೆ ಇದೀಗ ತಲ್ವಾರ್ ದಾಳಿ ನಡೆದ ಬಗ್ಗೆ ವರದಿಯಾಗಿದೆ.

ತನ್ನ ತಾಯಿ ಜೊತೆ ಊಟಕ್ಕೆಂದು ರೆಸ್ಟೋರೆಂಟ್ ಗೆ ತೆರಳುತ್ತಿದ್ದಾಗ ರೌಡಿ ಶೀಟರ್ ಮೇಲೆ ತಲ್ವಾರ್ ದಾಳಿಯಾದ ಘಟನೆ ಕಲ್ಲಾಪುವಿನಲ್ಲಿ ನಡೆದಿದೆ.

ಕಡಪ್ಪರ ಸಮೀರ್

ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಕಡಪ್ಪರ ಸಮೀರ್ ರವರನ್ನು ದುಷ್ಕರ್ಮಿಗಳು ತನ್ನ ತಾಯಿಯ ಕಣ್ಣಿನೆದುರಲ್ಲೇ ಅಟ್ಟಾಡಿಸಿ ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಮೀರ್ ಓಡಿ ಪರಾರಿಯಾಗಿದ್ದು ಸ್ಥಳದಲ್ಲಿ ಜನಸ್ತೋಮ ನೆರೆದಿದೆ.
ಟಾರ್ಗೆಟ್ ಇಲ್ಯಾಸ್ ಗ್ಯಾಂಗ್ ಈ ಕೃತ್ಯ ನಡೆಸಿದೆ ಎಂದು ಹೇಳಲಾಗುತ್ತಿದೆ.ಹೆಚ್ಚಿನ ಮಾಹಿತಿ ತನಿಖೆಯ ನಂತರವಷ್ಟೇ ಹೊರ ಬರಬೇಕಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!