dtvkannada

ತುಮಕೂರು: ರಸ್ತೆ ಬದಿ ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ಹೊರವಲಯದ ಕಾಮತ್ ಹೊಟೇಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೂತ್ರ ವಿಸರ್ಜನೆಗೆ ಎಂದು ಕಾರು‌ ನಿಲ್ಲಿಸಿದಾಗ ಈ ಘಟನೆ ನಡೆದಿದೆ. ಓರ್ವ ಮೂತ್ರ ವಿಸರ್ಜನೆಗೆ ತೆರಳಿದ್ದು, ಇನ್ನೂ ಇಬ್ಬರು ಕಾರಿನಲ್ಲಿ ಕುಳಿತಿರುವಾಗ ಹಿಂಬದಿಯಿಂದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ.

ಗೌಡರ ನಾಗಪ್ಪ (42) ಹಾಗೂ ರಜಾಕ್ ಸಾಬ್ (38) ಮೃತ ದುರ್ದೈವಿಗಳು. ಮೃತರು ಬಾದಾಮಿ ತಾಲೂಕಿನ ಗುಳೇದಗುಡ್ಡ ಮೂಲದವರು ಎನ್ನಲಾಗಿದೆ. ಮದುವೆಗೆಂದು ಬೆಂಗಳೂರಿಗೆ ಬರುತ್ತಿರುವಾಗ ತಡರಾತ್ರಿ ಈ ಘಟನೆ ನಡೆದಿದೆ. ಸದ್ಯ ಶಿರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!