dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಅನಾರೋಗ್ಯ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕನೋರ್ವ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ಪುತ್ತೂರು ಕುದ್ಮಾರು ಸಮೀಪದ ಕೂರತ್ ಎಂಬಲ್ಲಿ ಇಂದು ಸಂಭವಿಸಿದೆ ಮೃತಪಟ್ಟ ಬಾಲಕನನ್ನು ಕೂರತ್ ನಿವಾಸಿ ಸುಹೈಲ್ (19) ಎಂದು ಗುರುತಿಸಲಾಗಿದೆ.

ಕಳೆದ ಎರಡು ವಾರಗಳಿಂದ ನ್ಯೂಮೋನಿಯ ಮತ್ತು ಲಿವರ್ ಸಮಸ್ಯೆಯಿಂದ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕನಿಗೆ ಆರೋಗ್ಯ ಸಮಸ್ಯೆ ಮತ್ತಷ್ಟು ಹೆಚ್ಚಾಗಿದ್ದು ಚಿಕಿತ್ಸೆಗೆ ಸ್ಪಂದಿಸದೇ ಇಂದು ಸಂಜೆ ವೇಳೆ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಚಿಕ್ಕ ವಯಸ್ಸಿನ ಬಾಲಕನ ಅಕಾಲಿಕ ಮರಣಕ್ಕೆ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ. ಮೃತಪಟ್ಟ ಯುವಕ ಸಾಮಾಜಿಕ ಜಾಲ ತಾಣಗಳಲ್ಲಿ ಕವನ ಚುಟುಕು ಮುಂತಾದ ಬರಹಗಳನ್ನು ಬರೆಯುತ್ತ ಚಿಗುರೆಲೆ ಎಂದೆ ಪ್ರಸಿದ್ದಿ ಪಡೆದಿದ್ದ ಸಫ್ವಾನ್ ಕೂರತ್ ರವರ ಸಹೋದರ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!