dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಮನೆಯಲ್ಲಿ ಜನರು ನಿದ್ರಿಸುತ್ತಿರುವಾಗಲೇ ಕಳ್ಳತನ ನಡೆಸಿ ಚಿನ್ನಾಭರಣ ಸಹಿತ ನಗದುಗಳನ್ನು ದೋಚಿಕೊಂಡು ಹೋದ ಘಟನೆ ಉಪ್ಪಿನಂಗಡಿ ಸಮೀಪದ ತೆಕ್ಕಾರು ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.

ತೆಕ್ಕಾರುವಿನ ಗುತ್ತುಮನೆ ನಿವಾಸಿ ಮುಸ್ತಫಾ ರವರ ಮನೆಗೆ ಹೊಕ್ಕ ಕಳ್ಳರು ಹಿಂಬದಿ ಬಾಗಿಲಿನಿಂದ ಚಿಲಕ ತೆರೆದು ಮನೆಯೊಳಗೆ ಹೊಕ್ಕಿ ಸುಮಾರು 5 ಪವನ್ ನಷ್ಟು ಚಿನ್ನ ಮೂರು ಸಾವಿರ ರೂ ನಗದುಗಳನ್ನು ಕಳವುಗೈದು ಪರಾರಿಯಾಗಿದ್ದಾರೆ.

ಘಟನೆ:- ಮನೆಯವರ ಹೇಳಿಕೆಯಂತೆ ನಿನ್ನೆ ಸುಮಾರು ಮೂರರಿಂದ ನಾಲ್ಕುಗಂಟೆ ಹೊತ್ತಿಗೆ ಮನೆ ಕಳ್ಳತನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮುಸ್ತಫಾ ರವರ ಮನೆಗೆ ನೆಂಟರು ಬಂದಿದ್ದು ನೆಂಟರಿಷ್ಟರ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ.
ಅದೇ ವೇಳೆ ಅವರ ಬ್ಯಾಗ್ ಗಳನ್ನು ಎತ್ತಿಕೊಂಡು ಹೋಗಿದ್ದು ಪಕ್ಕದ ಅಂಗಳದಲ್ಲಿ ದೋಚಿ ಬಿಸಾಕಿ ಹೋಗಿದ್ದಾರೆ.

'; } else { echo "Sorry! You are Blocked from seeing the Ads"; } ?>

ಇದೇ ಸಂದರ್ಭದಲ್ಲಿ ತೆಕ್ಕಾರುವಿನ ಕೋಡಿ ನಿವಾಸಿ ಅನ್ವರ್ ಎಂಬವರ ಮನೆಗೂ ಕಳ್ಳರು ಹೊಕ್ಕಿದ್ದು ಮನೆಯೊಳಗಡೆ ಕಪಾಟ್ ನ ಒಳಗಡೆಯಿದ್ದ ನಗದನ್ನು ದೋಚಿಕೊಂಡಿದ್ದು ಆದರೆ ಅಕಸ್ಮಾತ್ ಅವರ ಜೇಬಿಗೆ ಹಾಕುವ ಹಣವು ಕೆಳಗಡೆ ಬಿದ್ದಿದ್ದು ಬೆಳಿಗ್ಗೆ ಹೊತ್ತು ಮನೆಯ ಯಜಮಾನಿ ನೀರು ಕುಡಿಯಲೆಂದು ಎದ್ದಾಗ ಕಳ್ಳತನ ನಡೆದ ಬಗ್ಗೆ ಅರಿವಾಗಿದೆ.
ಮನೆಯ ಹಿಂಬಾಗಿಲು ತೆರೆದ ಸ್ಥಿತಿಯಲ್ಲಿದ್ದು ದೋಚಿದ ಮೂರು ಸಾವಿರ ಹಣ ಅಂಗಳದಲ್ಲಿ ಬಿದ್ದು ಸಿಕ್ಕಿದೆ ಎಂದು ಅನ್ವರ್ ಮನೆಯವರು ತಿಳಿಸಿದ್ದಾರೆ. 

ಇದೇ ರೀತಿ ತೆಕ್ಕಾರು ವ್ಯಾಪ್ತಿಯ ಹಲವು ಮನೆಗಳಲ್ಲಿ ಕಳ್ಳತನ ನಡೆದಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿದ್ದು ಹೆಚ್ಚಿನ ವಿವರಗಳು ಹೊರ ಬರಬೇಕಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!