dtvkannada

ಕೋಲಾರ: ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಜಿಮ್ ಅನಿಲ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧನ ಮಾಡಲಾಗಿದೆ.
ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಗ್ರಾಮದ ಬಳಿ ಹುಡುಗಿಯನ್ನು ಚುಡಾಯಿಸಿದ್ದಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲೇ ಯುವಕರ ನಡುವೆ ಗಲಾಟೆಗಾಗಿ ಮಾರಾಮಾರಿಯಾಗಿದೆ.

ಸೆಪ್ಟೆಂಬರ್ 4 ರಂದು ಈ ಘಟನೆ ನಡೆದಿದ್ದು, ಹುಡುಗಿಯರನ್ನು ಚುಡಾಯಿಸಿದ್ದಕ್ಕೆ ಪರಸ್ಪರ ಎರಡು ಗುಂಪುಗಳ ಮೇಲೆ ಹಲ್ಲೆ ನಡೆದಿತ್ತು. ಬಸ್‌ನಲ್ಲಿ ಜಿಮ್ ಅನಿಲ್ ಸೇರಿ ಹಲವರು ಹಲ್ಲೆ ಮಾಡಿದ್ದರು. ಘಟನೆ ಸಂಬಂಧ 2 ಗುಂಪು ಮಧ್ಯೆ ಪರಸ್ಪರ ಹಲ್ಲೆ ನಡೆದಿತ್ತು. ಗೌನಿಪಲ್ಲಿ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿತ್ತು. ಇದೀಗ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪೊಲೀಸರಿಂದ ಆರೋಪಿಗಳನ್ನು ಬಂಧಿಸಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!