dtvkannada

ಮಂಗಳೂರು: ಕಳೆದ ಕೆಲವು ದಿನಗಳಿಂದ ಮಂಗಳೂರಿನ ಯೇನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಇಂದು (ಸೆಪ್ಟೆಂಬರ್ 13) ನಿಧನರಾಗಿದ್ದಾರೆ.

ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಹಲವು ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ದೂರವಾಣಿ ಕರೆ ಮಾಡಿದ ಸೋನಿಯಾ ಗಾಂಧಿ ಫೆರ್ನಾಂಡಿಸ್ ಪತ್ನಿಗೆ ಧೈರ್ಯ ತುಂಬಿದ್ದಾರೆ.

2 ದಿನದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಉಡುಪಿಯ ಕಾಂಗ್ರೆಸ್ ಕಛೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಬೆಂಗಳೂರಿಗೆ ಪ್ರಾರ್ಥಿವ ಶರೀರವನ್ನು ಕರೆದುಕೊಂಡು ಹೋಗಲಿದ್ದಾರೆ ಎಂದು ತಿಳಿದು ಬಂದಿದೆ

By dtv

Leave a Reply

Your email address will not be published. Required fields are marked *

error: Content is protected !!