dtvkannada

ಪುತ್ತೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧೀನದಲ್ಲಿರುವ ಯಂಗ್ ಬ್ರಿಗೇಡ್ ಸೇವಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ರಿಯಾಝ್ ಪರ್ಲಡ್ಕ ನೇಮಕವಾಗಿದ್ದಾರೆ.

ಹಾಲಿ ಪುತ್ತೂರು ನಗರಸಭಾ ಸದಸ್ಯರೂ ಆಗಿರುವ ರಿಯಾಝ್‌ರವರು, ಹಲವಾರು ಸಂಘಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದು ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿದ್ದಾರೆ.

ಹಲವಾರು ವರ್ಷಗಳಿಂದ ಯಂಗ್ ಬ್ರಿಗೇಡ್ ಸೇವಾದಳದಲ್ಲಿ ಸಕ್ರಿಯರಾಗಿರುವ ರಿಯಾಝ್ ಅವರ ಸೇವೆಯನ್ನು ಗುರುತಿಸಿ ರಾಜ್ಯಾಧ್ಯಕ್ಷರಾದ ಜುನೈದ್ ಪಿಕೆ ಮಾಡಿರುವ ಶಿಫಾರಸ್ಸಿನಂತೆ ರಾಷ್ಟ್ರೀಯ ಅಧ್ಯಕ್ಷ ಲಾಲಜಿ ದೇಸಾಯಿ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!