';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಅಬ್ದುಲ್ ಬಶೀರ್ ರವರ ಮಗ ಹಿದಾಯತುಲ್ಲಾ ಕಾಣೆಯಾದ ವ್ಯಕ್ತಿಯಾಗಿದ್ದಾನೆ.
ಹಿದಾಯತುಲ್ಲಾ ಅವರು ಪುತ್ತೂರಿನ ಚಿನ್ನದ ಮಳಿಗೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಸೆ. 13 ರಂದು ಸಜಿಪ ಮುನ್ನೂರು ಗ್ರಾಮದ ನಂದಾವರದ ತನ್ನ ಮನೆಯಿಂದ ಕೆಲಸಕ್ಕೆಂದು ಹೊರಟು ಹೋದವನು ವಾಪಾಸು ಮನೆಗೆ ಬಾರದೇ ಇದ್ದು, ಸೆ. 13ರಂದು ರಾತ್ರಿ 8.00 ಗಂಟೆಯ ಬಳಿಕ ಯಾರ ಸಂಪರ್ಕಕ್ಕೂ ಸಿಗದೇ ಕಾಣೆಯಾಗಿದ್ದಾನೆ.
ಈ ಬಗ್ಗೆ ಪುತ್ತೂರಿನ ಜ್ಯುವೆಲ್ಲರ್ಸ್ ಗೆ ಹೋಗಿ ವಿಚಾರಿಸಿದ ಸಂದರ್ಭದಲ್ಲಿ ಸುಮಾರು ಜನರು ಬಂದು ಹಿದಾಯತುಲ್ಲ ಹಲವರಿಂದ ಹಣ ಪಡೆದು ವಾಪಾಸು ನೀಡದಿರುವ ವಿಚಾರ ತಿಳಿದು ಬಂದಿದೆ, ಇನ್ನೂ ಹಿದಾಯತುಲ್ಲಾ ತಂದೆ ಕಾಣೆಯಾದ ಮಗನನ್ನು ಪತ್ತೆ ಮಾಡಿಕೊಡುವಂತೆ ಠಾಣೆಗೆ ದೂರು ನೀಡಿದ್ದಾರೆ