dtvkannada

ಮೈಸೂರು: ನಂಜನಗೂಡಿನಲ್ಲಿ ದೇವಸ್ಥಾನ ಕೆಡವಿದ ವಿಚಾರಕ್ಕೆ ಸಂಬಂಧಿಸಿ ಸರಕಾರದ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ದೇವಸ್ಥಾನಗಳನ್ನು ಕೆಡವಿ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದು ಮಾತ್ರವಲ್ಲದೇ, ದೇವಸ್ಥಾನಗಳ ನೆಲಸಮಕ್ಕೆ ಬಿಜೆಪಿ ಸರಕಾರವೇ ನೇರ ಕಾರಣ ಎಂದು ತೀವ್ರ ಅಕ್ರೋಶ ಹೊರಹಾಕಿದ್ದಾರೆ.

ಬಿಜೆಪಿ ನಾಯಕರ ಚಳಿ ಬಿಡಿಸಿದ ಸಿದ್ದು: ನಿನ್ನೆಯ ಸದನದಲ್ಲಿ ದೇಗುಲ ವಿಚಾರದಲ್ಲಿ ಸರಕಾರದ ವಿರುದ್ದ ಗುಡುಗಿದ್ದ ಸಿದ್ದರಾಮಯ್ಯ, ಬಿಜೆಪಿ ಮತ್ತು RSS ನವರು ರಾಮನ ಜಪ ಮಾಡುತ್ತಾರೆ ಮತ್ತು ದೇವಸ್ಥಾನ ಕೆಡವುತ್ತಾರೆ. ರಾಮಮಂದಿರದ ಹೆಸರಿನಲ್ಲಿ ನಾಟಕವಾಡಿ ಇಲ್ಲಿ ದೇವಸ್ಥಾನಗಳನ್ನು ಕೆಡವುತ್ತಿದ್ದಾರೆ. ರಾಜ್ಯ ಹಾಗೂ ಕೇಂದ್ರದಲ್ಲಿ ಇವರದ್ದೇ ಸರಕಾರವಿರುವಾಗ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಅಧಿಕಾರಿಗಳ ತಲೆಗೆ ಆ ಪಟ್ಟವನ್ನು ಕಟ್ಟುತ್ತಿದ್ದಾರೆ ಎಂದಿದ್ದಾರೆ.ಬಿಜೆಪಿ ಯವರು ಹುಸಿ ಹಿಂದುತ್ವವಾಧಿಗಳು ಎಂದು ಇದೇ ಸಂದರ್ಭದಲ್ಲಿ ಟೀಕಿಸಿದ್ದಾರೆ.ನ್ಯಾಯಾಲಯದ ಆದೇಶವಿದ್ದರೂ ಅದನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವ ಮುನ್ನ ಪರಿಣಾಮದ ಬಗ್ಗೆ ಯೋಚನೆ ಮಾಡಬೇಕಿತ್ತು. ಹಿಂದೂ ಧರ್ಮದ ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆನಪಾಗಿಲ್ಲವೇ ? ಎಂದು ಮೊನ್ನೆ ಟ್ವೀಟ್ ಮಾಡಿದ್ದರು.

ದೇವಸ್ಥಾನ ಕೆಡವಿ ಹಾಕಿದ ಘಟನೆ ಬಗ್ಗೆ ರಾಜ್ಯದ ಮುಖ್ಯಮಂತ್ರಿ ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಹೊಸ ನಿವೇಶನ ಮಂಜೂರು ಮಾಡಿ ಸರ್ವರನ್ನೂ ವಿಶ್ವಾಸಕ್ಕೆ ಪಡೆದು ನೂತನ ದೇವಸ್ಥಾನವನ್ನು ರಾಜ್ಯದ ಬಿಜೆಪಿ ಸರ್ಕಾರವೇ ನಿರ್ಮಿಸಿಕೊಡಬೇಕು” ಎಂದು ಸಿದ್ದರಾಮಯ್ಯ ಅವರು ಅಗ್ರಹಿಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!