dtvkannada

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಅಕ್ಟೋಬರ್ 3ರ ಆದಿತ್ಯವಾರದಂದು ನಡೆಯುವ ‘ಬ್ಯಾರಿ ಭಾಷಾ ದಿನಾಚರಣೆ’ ದಿನದಂದು ಗಾಯಕ ಅಶ್ರಫ್ ಸವಣೂರು’ಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಹಲವಾರು ವರ್ಷಗಳಿಂದ ಗಾಯನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಅಶ್ರಫ್ ಸವಣೂರು ಅವರು ಬ್ಯಾರಿ, ಮಲಯಾಳಂ, ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಹಲವಾರು ಹಾಡುಗಳನ್ನು ಹಾಡುವುದರ ಜೊತೆಗೆ ಹಲವಾರು ಹಾಡಿಗೆ ಸಾಹಿತ್ಯವನ್ನೂ ರಚಿಸಿದ್ದಾರೆ.

ಗಾಯನದ ಜೊತೆಗೆ ಕಾರ್ಯಕ್ರಮ ನಿರೂಪಣೆಯಲ್ಲೂ ತೊಡಗಿಸಿಕೊಂಡಿರುವ ಇವರು ವರ್ಷಗಳ ಹಿಂದೆ ಕರಾವಳಿಯಲ್ಲಿ ನಡೆದ ಬ್ಯಾರಿ ಬಾಸ್ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದರು.

ಸವಣೂರು ಮಾಂತೂರಿನ ಮರ್ಹೂಂ ಉಸ್ಮಾನ್ ಹಾಗು ನಬೀಸಾ ದಂಪತಿಯ ಪುತ್ರರಾಗಿರುವ ಇವರು ಪ್ರಸ್ತುತ ಪುತ್ತೂರಿನಲ್ಲಿ “ಝಮಾನ್ ಆಡಿಯೋ ಲ್ಯಾಬ್” ಸ್ಟುಡಿಯೋ ನಡೆಸುತ್ತಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!