dtvkannada

ಬೆಂಗಳೂರು: ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಪಟಾಕಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ವೈಯಕ್ತಿಕವಾಗಿ 2 ಲಕ್ಷ ರೂ.ಗಳ ಪರಿಹಾರ ನೀಡುತ್ತೇನೆ. ವೈದ್ಯಕೀಯ ಖರ್ಚನ್ನು ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.ಪಟಾಕಿ ಹಾಗೂ ಸಂಬಂಧಿಸಿದ ವಸ್ತುಗಳನ್ನು ಗೋಡೌನ್ ನಲ್ಲಿಟ್ಟುಕೊಂಡು, ಬೇರೆಡೆಗೆ ಸಾಗಾಟ ಮಾಡುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ.

ಸರ್ಕಾರದಿಂದ ಬಡವರಿಗೆ ಪರಿಹಾರ ನೀಡಬೇಕು. ಮೃತರ ಕುಟುಂಬಕ್ಕೆ ನಾನೂ ವೈಯಕ್ತಿಕವಾಗಿ 2 ಲಕ್ಷ ರೂ.ಗಳ ಪರಿಹಾರ ನೀಡುತ್ತೇನೆ. ವೈದ್ಯಕೀಯ ಖರ್ಚನ್ನು ನೋಡಿಕೊಳ್ಳುತ್ತೇನೆ ಎಂದರು.

By dtv

Leave a Reply

Your email address will not be published. Required fields are marked *

error: Content is protected !!