dtvkannada

ಸುಳ್ಯ,ಸೆ ,23: ನಗರ ಪಂಚಾಯತ್ ವ್ಯಾಪ್ತಿಯ ಗುರುಂಪಿನಲ್ಲಿ ಆಲೆಟ್ಟಿ ಸಂಪರ್ಕಿಸುವ ಕಾಂಕ್ರೀಟ್ ರಸ್ತೆಯ ಒಳಭಾಗದಲ್ಲಿ ಕುಡಿಯುವ ನೀರಿನ ಪೈಪ್ ಮುರಿದು ಕಳೆದ ಮೂರು ವರ್ಷದಿಂದ ಕುಡಿಯುವ ನೀರು ಪೊಲಾಗುತ್ತಿದೆ. ಈ ವಿಚಾರವಾಗಿ ಈ ಹಿಂದೆ ಹಲವಾರು ಬಾರಿ ನಗರ ಪಂಚಾಯತ್ ಮುಖ್ಯಾಧಿಕಾರಿಯವರ ಗಮನಕ್ಕೆ ತಂದರು ಸಮಸ್ಯೆಗೆ ಯಾವುದೇ ಪರಿಹಾರ ಕಾಣಲು ಸಾಧ್ಯವಾಗಿಲ್ಲ. ಅದಲ್ಲದೇ ಮೂರು ತಿಂಗಳ ಹಿಂದೆ SDPI ಕಲ್ಲುಮುಟ್ಲು ವಾರ್ಡ್ ಸಮಿತಿಯು ನಗರ ಪಂಚಾಯತ್ ಮುಖ್ಯಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಿದಾಗ ಹತ್ತು ದಿನಗಳ ಒಳಗಾಗಿ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದರು,

ಆದರೆ ಇವತ್ತಿನವರೆಗೆ ಯಾವೊಬ್ಬ ಅಧಿಕಾರಿಯು ಸ್ಥಳಕ್ಕೆ ಬೇಟಿ ನೀಡಿಲ್ಲ. ಆದ್ದರಿಂದ ಮುಂದಿನ ಹತ್ತು ದಿನಗಳ ಒಳಗಾಗಿ ಸಮಸ್ಯೆಗೆ ಶಾಶ್ವತವಾದ ಪರಿಹಾರವನ್ನು ಕಲ್ಪಿಸದಿದ್ದಲ್ಲಿ ಅಕ್ಟೋಬರ್ 4ರಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುವುದಾಗಿ ಎಸ್ ಡಿಪಿಐ ಸುಳ್ಯ ನಗರ ಸಮಿತಿ ಅಧ್ಯಕ್ಷ ಅಥಾವುಲ್ಲಾ ರವರು ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ ಪತ್ರ ನೀಡಿ ಎಚ್ಚರಿಸಿದ್ದಾರೆ. ಈ ಸಂದರ್ಭದಲ್ಲಿ ಎಸ್ ಡಿಪಿಐ ಸುಳ್ಯ ನಗರ ಸಮಿತಿ ಸದಸ್ಯರಾದ ಸಿದ್ದೀಕ್ ಸಿ.ಎ ಉಪಸ್ಥಿತರಿದ್ದರು.

By dtv

Leave a Reply

Your email address will not be published. Required fields are marked *

error: Content is protected !!