ಉಪ್ಪಿನಂಗಡಿ, ಸೆ.30: ಬಾಟಲಿಯಲ್ಲಿದ್ದ ಪೆಟ್ರೋಲ್ ಅನ್ನು ನೀರೆಂದು ಕುಡಿದ ಅಜ್ಜಿ ಮೃತಪಟ್ಟ ಘಟನೆ ಪೆರ್ನೆ ಸಂಪದಕೋಡಿಯಲ್ಲಿ ನಿನ್ನೆ ಸಂಭವಿಸಿದೆ.
ಬಂಟ್ವಾಳದ ಪದ್ಮಾವತಿ (79) ಮೃತರು. ಸೆ.26ರಂದು ಪೆರ್ನೆಯ ಮಗಳ ಮನೆಗೆ ಪದ್ಮಾವತಿ ಬಂದಿದ್ದರು. ಹುಲ್ಲು ಕತ್ತರಿಸುವ ಯಂತ್ರಕ್ಕೆಂದು ಮನೆಯವರು ಬಾಟಲಿಯಲ್ಲಿ ಪೆಟ್ರೋಲ್ ತಂದಿಟ್ಟಿದ್ದರು.
ದೃಷ್ಟಿದೋಷದಿಂದ ಬಳಲುತ್ತಿದ್ದ ಅಜ್ಜಿ, ಪೆಟ್ರೋಲ್ ಇದ್ದ ಬಾಟಲಿಯನ್ನ ನೀರೆಂದು ಭಾವಿಸಿ ಕುಡಿದಿದ್ದರು.
ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ನಿನ್ನೆ ಕೊನೆಯುಸಿರೆಳೆದರು. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.