dtvkannada

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪ್ರಕರಣ ಆಧರಿಸಿ ಕರ್ನಾಟಕ ಸರ್ಕಾರ ಹಿರಿಯ ಅಧಿಕಾರಿಗಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆಗೆ ನಿರ್ಬಂಧ ವಿಧಿಸಿದೆ. ಯಾವ ಅಧಿಕಾರಿಯೂ ಮಾಧ್ಯಮಗಳಿಗೆ ಹೇಳಿಕೆ ನೀಡುವಂತಿಲ್ಲ ಎಂದು ಮಂಡ್ಯದಲ್ಲಿ ಕಂದಾಯ ಸಚಿವ ಆರ್‌.ಅಶೋಕ್ ಸ್ಪಷ್ಟಪಡಿಸಿದ್ದಾರೆ. ಯಾವುದೇ ವಿಚಾರಗಳನ್ನೂ ಸಹ ಮಾಧ್ಯಮಗಳಿಗೆ ಹೇಳುವಂತಿಲ್ಲ ಎಂದು ಕಠಿಣ ಎಚ್ಚರಿಕೆ ವಿಧಿಸಿದ್ದಾರೆ.
ಸರ್ಕಾರಿ ಅಧಿಕಾರಿಗಳು ಕೇಂದ್ರ, ರಾಜ್ಯ ಸರ್ಕಾರದ ನೀತಿಗಳ ಬಗ್ಗೆ ಟೀಕಿಸಬಾರದು. ಸರ್ಕಾರದ ನೀತಿಗಳ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಬಾರದು. ಸಂಬಂಧಿಸಿದ ಪ್ರಾಧಿಕಾರದ ಪೂರ್ವಾನುಮೋದನೆ ಪಡೆಯದೆ ಯಾವುದೇ ಸರ್ಕಾರಿ ನೌಕರ ಪ್ರತಿಕೂಲ ಟೀಕೆ ಮಾಡುವಂತಿಲ್ಲ. ಅನುಮತಿ ಇಲ್ಲದೆ ಕೋರ್ಟ್‌ ಮತ್ತು ಮಾಧ್ಯಮಗಳ ಮೊರೆ ಹೋಗುವಂತಿಲ್ಲ. ನಿಯಮವನ್ನು ಮೀರಿ ಸರ್ಕಾರಕ್ಕೆ ವರ್ಚಸ್ಸಿಗೆ ಧಕ್ಕೆ ತಂದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ವಿಧಿಸಿದೆ.

ಸರ್ಕಾರಿ ಯೋಜನೆ ಪ್ರಚಾರಕ್ಕೆ ಮಾತ್ರ ಮಾಧ್ಯಮಗಳನ್ನು ಬಳಸಬೇಕು. ಕುಂದು ಕೊರತೆ ವ್ಯಕ್ತಪಡಿಸಲು ಮಾಧ್ಯಮಗಳನ್ನು ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಇಲಾಖೆಯ ಸಾಧನೆಗಳ ಬಗ್ಗೆ, ಅಥವಾ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ಪ್ರಸಾರ ಮಾಡಬೇಕಾದ ಸಂದರ್ಭದಲ್ಲಿ ಅಧಿಕಾರಿಗಳು ವೈಯಕ್ತಿಕ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಬಳಸದೇ ಸರ್ಕಾರದ ಆಡಳಿತ ಹೆಸರಿನಲ್ಲಿ ತೆರೆಯಲಾದ ಖಾತೆಗಳನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಕರ್ನಾಟಕ ಸರ್ಕಾರ ಸೂಚಿಸಿದೆ.

By dtv

Leave a Reply

Your email address will not be published. Required fields are marked *

error: Content is protected !!